Monday, June 23, 2025
26.3 C
Bengaluru
Google search engine
LIVE
ಮನೆಆರೋಗ್ಯಉಜ್ಬೆಕಿಸ್ತಾನದಲ್ಲಿ ಬೆಂಗಳೂರಿಗನ ಹೋಟೆಲ್; ಮಸಾಲೆ ದೋಸೆ, ಚಿಕನ್ ಬಿರಿಯಾನಿ ಬಲು ಫೇಮಸ್

ಉಜ್ಬೆಕಿಸ್ತಾನದಲ್ಲಿ ಬೆಂಗಳೂರಿಗನ ಹೋಟೆಲ್; ಮಸಾಲೆ ದೋಸೆ, ಚಿಕನ್ ಬಿರಿಯಾನಿ ಬಲು ಫೇಮಸ್

The Indian Kitchen Restaurant In Uzbekistan: ಪ್ರಪಂಚ ಪರ್ಯಟನೆ ಮಾಡಬೇಕೆಂಬ ಹಪಾಹಪಿಯಲ್ಲಿದ್ದ ಬೆಂಗಳೂರಿನ ನೌಷಾದ್ ಅವರು ಸ್ಯಾಮರ್​ಕ್ಯಾಂಡ್​ನಲ್ಲಿ ಹೋಟೆಲ್ ಆರಂಭಿಸಲು ನಿರ್ಧರಿಸಿದರು. ಅಂತೆಯೇ ಅವರು ದಿ ಇಂಡಿಯಾ ಕಿಚನ್ ರೆಸ್ಟೋರೆಂಟ್ ತೆರೆದಿದ್ದಾರೆ. ಭಾರತೀಯ ಸಮುದಾಯ ಮಾತ್ರವಲ್ಲ, ಸ್ಥಳೀಯ ಜನರಿಗೂ ಅಚ್ಚುಮೆಚ್ಚಾಗುವಂತೆ ಬೆಳೆದಿದೆ.

ಬೆಂಗಳೂರು, ನವೆಂಬರ್ 19: ಬೆಂಗಳೂರಿನ ವ್ಯಕ್ತಿಯೊಬ್ಬರು ದೂರದ ಉಜ್ಬೆಕಿಸ್ತಾನದಲ್ಲಿ ಭಾರತೀಯ ರೆಸ್ಟೋರೆಂಟ್​ವೊಂದನ್ನು ತೆರೆದಿದ್ದು, ಅಲ್ಲಿಯ ಭಾರತೀಯ ಸಮುದಾಯ ಮಾತ್ರವಲ್ಲ, ಸ್ಥಳೀಯ ಜನರಿಗೂ ಅಚ್ಚುಮೆಚ್ಚಾಗುವಂತೆ ಬೆಳೆದಿದೆ. ಸ್ಟೀಲ್ ಕಂಪನಿಯೊಂದರಲ್ಲಿ ಕೆಲಸ ಮಾಡಿ ನಿವೃತ್ತರಾಗಿರುವ ಮೊಹಮ್ಮದ್ ನೌಶಾದ್ ಅವರು ಒಂದು ವರ್ಷದ ಹಿಂದೆ (2022ರಲ್ಲಿ) ಉಜ್ಬೆಕಿಸ್ತಾನದ ಸ್ಯಾಮೆರ್​ಕ್ಯಾಂಡ್ ನಗರದಲ್ಲಿ (Samarkand city of Uzbekistan) ಆರಂಭಿಸಿದ ‘ದಿ ಇಂಡಿಯನ್ ಕಿಚನ್’ ರೆಸ್ಟೋರೆಂಟ್ ಬಹಳ ಜನಪ್ರಿಯವಾಗಿದೆ.

ಉಜ್ಬೆಕಿಸ್ತಾನದಲ್ಲಿ ಭಾರತೀಯ ಸಮುದಾಯದವರು 5,000ಕ್ಕೂ ಹೆಚ್ಚು ಮಂದಿ ಇದ್ದಾರೆ. ಇದರ ಜೊತೆಗೆ ಉಜ್ಬೆಕಿಸ್ತಾನಕ್ಕೆ ಪ್ರವಾಸ ಹೋಗಿ ಬರುವವರ ಸಂಖ್ಯೆಯೂ ದೊಡ್ಡದು. ಈ ವರ್ಷವೊಂದರಲ್ಲೇ 30,000 ಭಾರತೀಯರು ಉಜ್ಬೆಕಿಸ್ತಾನಕ್ಕೆ ಪ್ರವಾಸ ಮಾಡಿದ್ದಾರೆ. ಇನ್ನು, ಸಮರಖಂಡ್ ಅಥವಾ ಸ್ಯಾಮೆರ್​ಕ್ಯಾಂಡ್ ಉಜ್ಬೆಕಿಸ್ತಾನದ ಎರಡನೇ ಅತಿದೊಡ್ಡ ನಗರವಾಗಿದೆ. ಇಲ್ಲಿ ವೈದ್ಯಕೀಯ ಶಿಕ್ಷಣಕ್ಕೆಂದು ಭಾರತೀಯರು ಬರುತ್ತಾರೆ. ಇಲ್ಲಿ 3,000ಕ್ಕೂ ಹೆಚ್ಚು ಮಂದಿ ಭಾರತೀಯರು ಇದ್ದಾರೆ. ಭಾರತೀಯ ಶೈಲಿಯ ಆಹಾರ ಇಲ್ಲಿ ಸಿಗುವುದಿಲ್ಲ. ಮೊಹಮ್ಮದ್ ನೌಷಾದ್ ಅವರು ಸ್ಯಾಮೆರ್​ಕ್ಯಾಂಡ್​ಗೆ ಹೋದಾಗ ಈ ಬೇಡಿಕೆಯನ್ನು ಗುರುತಿಸಿದರು.

ಪ್ರಪಂಚ ಪರ್ಯಟನೆ ಮಾಡಬೇಕೆಂಬ ಹಪಾಹಪಿಯಲ್ಲಿದ್ದ ಬೆಂಗಳೂರಿನ ನೌಷಾದ್ ಅವರು ಸ್ಯಾಮರ್​ಕ್ಯಾಂಡ್​ನಲ್ಲಿ ಹೋಟೆಲ್ ಆರಂಭಿಸಲು ನಿರ್ಧರಿಸಿದರು. ಅಂತೆಯೇ ಅವರು ದಿ ಇಂಡಿಯಾ ಕಿಚನ್ ರೆಸ್ಟೋರೆಂಟ್ ತೆರೆದಿದ್ದಾರೆ.

ಮಸಾಲೆ ದೋಸೆ, ಚಿಕನ್ ಬಿರ್ಯಾನಿ ಬಲು ಫೇಮಸ್

ಕುತೂಹಲವೆಂದರೆ ಮೊಹಮ್ಮದ್ ನೌಷಾದ್ ಅವರು ಭಾರತೀಯ ಸಮುದಾಯದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಭಾರತೀಯ ಶೈಲಿಯ ಹೋಟೆಲ್ ಅನ್ನು ಆರಂಭಿಸಿದ್ದರು. ಅವರ ಹೋಟೆಲ್​ನ ಊಟದ ರುಚಿ ಭಾರತೀಯರಿಗೆ ಮಾತ್ರವಲ್ಲ, ಸ್ಥಳೀಯ ಉಜ್ಬೆಕ್ ಜನರನ್ನೂ ಸೆಳೆದಿದೆ. ಇಲ್ಲಿಯ ಮಸಾಲೆ ದೋಸೆ ಮತ್ತು ಚಿಕನ್ ಬಿರಿಯಾನಿ ಎಲ್ಲರಿಗೂ ಅಚ್ಚುಮೆಚ್ಚಿನದ್ದಾಗಿದೆ.

ದಿ ಇಂಡಿಯಾ ಕಿಚನ್ ಹೋಟೆಲ್ ಯಶಸ್ಸಿನ ಹಿಂದೆ ಮೊಹಮ್ಮದ್ ನೌಷಾದ್ ಮಾತ್ರವಲ್ಲ ಅಶೋಕ್ ಕಾಳಿದಾಸ ಎಂಬ ವ್ಯಕ್ತಿಯೂ ಇದ್ದಾರೆ. ತಮಿಳುನಾಡು ಮೂಲದ ಅಶೋಕ್ ಕಾಳಿದಾಸ ಅವರು ಈ ರೆಸ್ಟೋರೆಂಟ್​​ನ ಬಾಣಸಿಗ ಅಥವಾ ಚೆಫ್. ತಾಷ್ಕೆಂಟ್​ನಲ್ಲಿದ್ದ ಅವರನ್ನು ನೌಷಾದ್ ಅವರು ಸ್ಯಾಮೆರ್​ಕ್ಯಾಂಡ್​ಗೆ ಕರೆತಂದು ಜವಾಬ್ದಾರಿ ಕೊಟ್ಟಿದ್ದಾರೆ. ಇಬ್ಬರು ದಕ್ಷಿಣ ಭಾರತೀಯರು ಸೇರಿ ಉಜ್ಬೆಕಿಸ್ತಾನದಲ್ಲಿ ಭಾರತೀಯ ಸಾಂಪ್ರದಾಯಿಕ ಆಹಾರವನ್ನು ಉಣಬಡಿಸುತ್ತಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments