Freedom TV

ಉತ್ತರಾಕಾಶಿ ಸುರಂಗ ಮಾರ್ಗದಲ್ಲಿ ಸಿಲುಕಿ ಸಾವು ಗೆದ್ದ ಕಾರ್ಮಿಕರೊಂದಿಗೆ ಮಾತಾಡಿ ಅಭಿನಂದಿಸಿದ ಪ್ರಧಾನಿ ಮೋದಿ

ದೆಹಲಿ: ಉತ್ತರಾಖಂಡ್ ರಾಜ್ಯದ ಉತ್ತರಕಾಶಿ ಬಳಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಮಾರ್ಗವೊಂದು ಕುಸಿದ ಕಾರಣ ಹದಿನೇಳು ದಿನಗಳ ಕಾಲ ಅವಶೇಷಗಳಡಿ ಸಿಲುಕಿ ಸಾವು ಬದುಕಿನೊಂದಿಗೆ ಹೋರಾಡಿ ಒಂದು ಭಾರೀ ಕಾರ್ಯಾಚರಣೆಯ ಬಳಿಕ ನಿನ್ನೆ ತಡರಾತ್ರಿ ಹೊರಬಂದ 41 ಕಾರ್ಮಿಕರ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಾತಾಡಿದರು. ಕಾರ್ಮಿಕರ ಧೈರ್ಯ ಸಾಹಸಗಳನ್ನು ಕೊಂಡಾಡಿದರು.

ಸಾವನ್ನು ಗೆದ್ದು ಬಂದ ಕಾರ್ಮಿಕರ ಪರವಾಗಿ ಮಾತಾಡಿದ ಬಿಹಾರದ ಛಾಪ್ರಾ ಜಿಲ್ಲೆಯ ಸೋನು ಕುಮಾರ್ ಸಹಾ ತಮ್ಮನ್ನು ಕಾಪಾಡಿದ ಎಲ್ಲರಿಗೂ ಧನ್ಯವಾದ ಹೇಳಿದರು. ಭೂಮಿಯ ಗರ್ಭದಲ್ಲಿ ಹೇಗೆ 17 ದಿನಗಳನ್ನು ಹೇಗೆ ಕಳೆದರು ಅನ್ನೋದನ್ನು ಪ್ರಧಾನಿ ಮೋದಿಯವರಿಗೆ ವಿವರಿಸಿದರು. ಕಾರ್ಮಿಕರಿಗೆ ಪ್ರತಿಕ್ರಿಯಿಸಿದ ಮೋದಿಯವರು, ನಿಮ್ಮ ಧೈರ್ಯ, ಸಾಹಸಗಳನ್ನು ಕೊಂಡಾಡುತ್ತೇನೆ, ನೀವು ತೋರಿದ ಶೌರ್ಯ ಅಪ್ರತಿಮವಾದದ್ದು, ಸಂಕಟ ಸಮಯದಲ್ಲಿ ಎದೆಗುಂದದೆ ಪರಿಸ್ಥಿತಿಯನ್ನ ಹೇಗೆ ನಿಭಾಯಿಸಬೇಕೆನ್ನುವುದಕ್ಕೆ ಒಂದ ದೊಡ್ಡ ನಿದರ್ಶನವನ್ನು ದೇಶಕ್ಕೆ ನೀಡಿದ್ದೀರಿ ಎಂದರು. ದೇಶದ ಪ್ರತಿಯೊಬ್ಬ ವ್ಯಕ್ತಿ ನಿಮ್ಮ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದರು. ನಿಮ್ಮ ಪರಿವಾರಗಳ ಪ್ರಾರ್ಥನೆ, ಪರಮಾತ್ಮನ ಕೃಪೆ ಮತ್ತು ದಯೆ ಹಾಗೂ 140 ಕೋಟಿ ಭಾರತೀಯರ ಶುಭಹಾರೈಕೆಗಳಿಂದ ನೀವು ಕ್ಷೇಮವಾಗಿ ಹೊರಬಂದಿದ್ದೀರಿ ಎಂದು ಹೇಳಿದರು. ಕಾರ್ಮಿಕರೊಂದಿಗೆ ಮಾತು ಮುಗಿದ ಬಳಿಕ ಎಲ್ಲರೂ ಭಾರತ್ ಮಾತಾ ಕೀ ಜೈ ಎಂದು ಕೂಗಿದರು.

Comments (0)

Your email address will not be published. Required fields are marked *

Back to top button