Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಕರ್ನಾಟಕದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ -ಡಿ.ಕೆ.ಸುರೇಶ್​​

ಕರ್ನಾಟಕದಲ್ಲಿ ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ -ಡಿ.ಕೆ.ಸುರೇಶ್​​

 ಮೈಸೂರು:ಮುಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ನ  ಮಾಜಿ ಸಂಸದ ಡಿಕೆ ಸುರೇಶ್, ಜಾರಿ ನಿರ್ದೇಶನಾಲಯ ದಾಳಿ ರಾಜಕೀಯ ಪ್ರೇರಿತ ಎಂದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 10-15 ದಿನದ ಹಿಂದೆ ಇಡಿ ಅಧಿಕಾರಿಗಳು ಕೇಸ್ ದಾಖಲಿಸಿದ್ದರು. ಕೇಸ್​ ದಾಖಲಾದ ಹಿನ್ನೆಲೆಯಲ್ಲಿ ದಾಳಿ ಸಾಮಾನ್ಯ. ಮುಡಾ ಕೇಸ್​ನಲ್ಲಿ ಯಾವುದೇ ಹಣಕಾಸು ವಹಿವಾಟು ನಡೆದಿಲ್ಲ. ಈ‌ ಪ್ರಕರಣದಲ್ಲಿ ಏನೂ ಇಲ್ಲ ಎಂಬುದು ಅವರಿಗೆ ಗೊತ್ತಾಗಲಿದೆ. ಲೋಕಾಯುಕ್ತ ಪ್ರವೇಶಕ್ಕೆ ಅವಕಾಶವಿದೆ, ಸತ್ಯಾಂಶ ಹೊರ ಬರಬೇಕು. ಇದೊಂದು ರಾಜಕೀಯ ಪ್ರೇರಿತ ಪ್ರಕರಣ ಎಂದರು.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments