ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೆವಸ್ಥಾನದ ಪ್ರಸಾದದ ಉಂಡೆಯಲ್ಲಿ ಹಂದಿಯ ಕೊಬ್ಬು ಮತ್ತು ಇತರ ಪ್ರಾಣಿಗಳ ಕೊಬ್ಬನ್ನು ಮಿಶ್ರಣ ಮಾಡುತ್ತಿದ್ದಾರೆ ಎಂಬ ಸುದ್ದಿ ಕೇಳಿ ಕರ್ನಾಟಕದ ಎಲ್ಲಾ ದೇಗುಲದಲ್ಲಿ ನಂದಿನಿ ತುಪ್ಪವನ್ನೇ ಬಳಶಬೇಕು ಎಂದು ಸರ್ಕಾರದ ಸೂಚನೆ ಹೊರಡಿಸಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾ ಖೆಗೆ ಒಳಪಡುವ ಎಲ್ಲಾ 34,500ಕ್ಕೂ ಹೆಚ್ಚು ದೇವಾ ಲಯಗಳಲ್ಲೂ ಮಂಗಳಾರತಿಯ ದೀಪದಿಂದ ಹಿಡಿದು ಪ್ರಸಾದ, ದಾಸೋಹ ತಯಾರಿಕೆ ಉವರೆಗಿನ ಎಲ್ಲಾ ಸೇವೆಗೂ ನಂದಿನಿ ತುಪ್ಪ ಮಾತ್ರವೇ ಬಳಸ ಬೇಕೆಂದು ಸರ್ಕಾರ ಶುಕ್ರವಾರ ಸೂಚನೆ ನೀಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖಾ ಆಯುಕ್ತರು, ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ದೀಪಗಳಿಗೆ, ವಿವಿಧ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು.