Tuesday, January 27, 2026
24.7 C
Bengaluru
Google search engine
LIVE
ಮನೆಜಿಲ್ಲೆಕಾಂಗ್ರೆಸ್​ ಸೇರ್ಪಡೆ ಬಳಿಕ ಪೂರ್ಣಿಮಾ ಶ್ರೀನಿವಾಸ್​​ ಹೇಳಿದ್ದೇನು..?

ಕಾಂಗ್ರೆಸ್​ ಸೇರ್ಪಡೆ ಬಳಿಕ ಪೂರ್ಣಿಮಾ ಶ್ರೀನಿವಾಸ್​​ ಹೇಳಿದ್ದೇನು..?

ಚಿತ್ರದುರ್ಗ : ಬಿಜೆಪಿಯಿಂದ ಕಾಂಗ್ರೆಸ್ ಸೇರಿ‌ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿದರು. ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಮಾಜಿ ಶಾಸಕಿ ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್​ಗೆ ಅದ್ದೂರಿ ಸ್ವಾಗತ ಕೋರಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಮೇಲುಗೈ ತರೋಣ, ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ, ನಿಮ್ಮೆಲ್ಲರ ಸಹಕಾರವಿರಲಿ ಎಂದು ಕಾಂಗ್ರೆಸ್ ಮುಖಂಡರಲ್ಲಿ‌ ಮಾಜಿ ಶಾಸಕಿ ಪೂರ್ಣಿಮಾ ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಟಿ‌ ಶ್ರೀನಿವಾಸ್ ಹೇಳಿಕೆ ರಾಜ್ಯದಲ್ಲಿ ಪ್ರವರ್ಗ 1 ರ ಸಂಘಟನೆ ಕಟ್ಟಿ ರಾಜ್ಯ ಸುತ್ತಿದ್ದೇನೆ. ಸಣ್ಣ ಸಣ್ಣ ಸಮಾಜಗಳನ್ನು ಇದರಡಿಯಲ್ಲಿ‌ ತಂದಿದ್ದೇವೆ. 5 ಲಕ್ಷ ಸದಸ್ಯರನ್ನು ಒಳಗೊಂಡಿರುವ ಪ್ರವರ್ಗ 1 ದೇವರಲ್ ಸಮಾಜವನ್ನು ಗುರುತಿಸಿ ಅವರಿಗೆ ಪ್ರತ್ಯೇಕ ಸ್ಥಾನ ಕೊಡಿಸುವ ನಿಟ್ಟಿನಲ್ಲಿ‌ ಹೋರಾಡುತ್ತೇವೆ. ತಮಿಳು ನಾಡು, ತೆಲಂಗಾಣದಲ್ಲಿ ಪ್ರತ್ಯೇಕ ಸ್ಥಾನ ಹಾಗೂ ಬಜೆಟ್​ನಲ್ಲೂ ಅನುದಾನ ನೀಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಕೂಡ ಇದಕ್ಕಾಗಿ ಒತ್ತಾಯಿಸಲಾಗುತ್ತದೆ ಎಂದು ಹೇಳಿದರು.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments