ಕುಂದಾಪುರ : ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಟ ರಿಶಬ್ ಶೆಟ್ಟಿ ಅವರು ತಾನು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಸಿನಿಮಾ ಜಾಗೃತಿ ಮೂಡಿಸಿದ ಸಿನಿಮಾವಾಗಿತ್ತು, ನಟ ನಿರ್ದೇಶಕ ರಿಷಬ್ ಶೆಟ್ಟಿ ಕೇವಲ ಸಿನೆಮಾದಲ್ಲಿ ಮಾತ್ರವಲ್ಲದೇ ಕನ್ನಡ ಶಾಲೆಗಳನ್ನು ಉಳಿಸುವ ಪ್ರಯತ್ನದಲ್ಲಿದ್ದಾರೆ.

ಕೆರಾಡಿ ಶಾಲೆಗೆ ಭೇಟಿ ನೀಡಿ ಕನ್ನಡ ಶಾಲೆ ಉಳಿಸುವ ಮತ್ತು ಬೆಳೆಸುವ ಕನಸನ್ನು ಬಿಚ್ಚಿಟ್ಟರು. ಈ ಸಂದರ್ಭದಲ್ಲಿ ಊರ ಪ್ರಮುಖರು, ಹಿರಿಯರು ಉಪಸ್ಥಿತರಿದ್ದರು. ಇದೇ ವೇಳೆ ರಿಷಭ್ ಶೆಟ್ಟಿಯವರನ್ನು ಅಭಿನಂದಿಸಿದರು.