ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ನಿವಾಸಕ್ಕೆ ಬುಧವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಈಶ್ವರಪ್ಪ ಅವರ ಆಶೀರ್ವಾದ ಪಡೆದರು.

ವಿಜಯೇಂದ್ರ ಅವರನ್ನು ಈಶ್ವರಪ್ಪ ಪುತ್ರ ಕೆ.ಈ ಕಾಂತೇಶ ಸ್ವಾಗತಿಸಿದರು. ಈಶ್ವರಪ್ಪ ಅವರಿಗೆ ಶಾಲು ಹಾಕಿ ವಿಜಯೇಂದ್ರ ಸನ್ಮಾನ ಮಾಡಿದರು. ವಿಜಯೇಂದ್ರ ಅವರನ್ನು ಅಭಿನಂದಿಸಿ ಈಶ್ವರಪ್ಪ ಸಿಹಿ ತಿನ್ನಿಸಿದರು. ಈ ವೇಳೆ ಕಾರ್ಯಕರ್ತರು ಜಯ ಘೋಷ ಕೂಗಿದರು. ನಂತರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಕೊಂಡೊಯ್ಯಲಾಯಿತು.