ಗುರುಭವನ ನಿರ್ಮಾಣ ಮಾಡುವ ಪುಣ್ಯ ನನಗೆ ಸಿಕ್ಕಿದೆ : ವಿ. ಸೋಮಣ್ಣ

ತುಮಕೂರು : ಸಿದ್ದಗಂಗಾ ಮಠದಲ್ಲಿ ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ಹಿನ್ನಲೆ ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದರು. ವಿ. ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡಿರುವ ಗುರುಭವನ ಕಟ್ಟಡವಾಗಿದೆ. ಶಿವೈಕ್ಯ ಶಿಮಕುಮಾರ್ ಶ್ರೀಗಳ ಗದ್ದಿಗೆಗೆ ವಿ. ಸೋಮಣ್ಣ, ಅವರ ಪತ್ನಿ ಶೈಲಜಾ ಸೋಮಣ್ಣ, ಪುತ್ರ ಅರುಣ್ ಸೋಮಣ್ಣ ಪೂಜೆ ಸಲ್ಲಿಸಿದ್ದರು.

ಸಿದ್ದಗಂಗಾ ಮಠದಲ್ಲಿ ಗುರುಭವನ ನಿರ್ಮಾಣ ಕುರಿತು ಮಾತನಾಡಿದ ಅವರು, ಸಿದ್ದಗಂಗಾ ಮಠದಲ್ಲಿ ಗುರುಭವನ ನಿರ್ಮಾಣ ಮಾಡುವ ಪುಣ್ಯ ನನಗೆ ಸಿಕ್ಕಿದೆ. ಶ್ರೀ ಶಿವಕುಮಾರ ಶ್ರೀಗಳ ಆಶೀರ್ವಾದದಿಂದ ಈ ಒಳ್ಳೆ ಕೆಲಸ ನಡೀತಿದೆ ಎಂದರು. ಈ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ.ಪರಮೇಶ್ವರ್, ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಕೂಡ ಬರುತ್ತಾರೆ. ಈ ಸ್ಥಳದಲ್ಲಿ ಯಾವುದೇ ರಾಜಕೀಯ ವಿಚಾರ ಮಾತಾಡೋದಿಲ್ಲ ಹಾಗೂ ಕಾರ್ಯಕ್ರಮಕ್ಕೆ ರಾಜಕೀಯ ಲೇಪ ಮಾಡೋದು ಸರಿಯಲ್ಲ ಎಂದು ಹೇಳಿದರು. ಡಿ.6 ರ ನಂತರ ಕೆಲ ವಿಚಾರ ಹೇಳುತ್ತೇನೆ ಎಂದಿದ್ದೇನೆ. ಈ ಕಾರ್ಯಕ್ರಮ ಮುಗಿದ ಬಳಿಕ ರಾಜಕೀಯ ಮಾತನಾಡುತ್ತೇನೆ. ರಾಜಕೀಯಕ್ಕೂ ಗುರುಭವನ ಲೋಕಾರ್ಪಣೆ ಕಾರ್ಯಕ್ರಮಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಸಚಿವ ವಿ. ಸೋಮಣ್ಣ ತಿಳಿಸಿದರು.




