ತುಮಕೂರು : ಡಿಕೆಶಿ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತನಿಖೆಯ ಆದೇಶವನ್ನು ಹೈಕೋರ್ಟ್ ವಾಪಾಸ್ ಪಡೆದಿರುವುದನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ವಾಗತಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಈ ಹಿಂದೆ ಇದ್ದ ಬಿಜೆಪಿ ಸರ್ಕಾರ ತಪ್ಪು ಮಾಡಿದೆ ಎಂದು ಹೇಳಿದರು. ಸ್ಪೀಕರ್ ಅನುಮತಿ ಇಲ್ಲದೇ ಪ್ರಕರಣ ಸಿಬಿಐಗೆ ಕೊಟ್ಟಿದ್ದರಿಂದ ಕೇಸ್ ವಾಪಾಸ್ ಪಡೆದಿದ್ದೇವೆ. ಸರ್ಕಾರದ ಆದೇಶವನ್ನು ಹೈಕೋರ್ಟ್ಗೆ ಕಮ್ಯುನಿಕೇಟ್ ಮಾಡಿದ್ದೇವೆ. ಇದಕ್ಕೆ ರಿಲೀಫ್ ಸಿಕ್ಕಿದೆ ಅಂದ್ರೆ ಬಹಳ ಸಂತೋಷವಾಗಿದೆ ಎಂದು ಹೇಳಿದರು.