Monday, June 23, 2025
26.6 C
Bengaluru
Google search engine
LIVE
ಮನೆಮನರಂಜನೆತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಡಿಸಿಎಂ ಪವನ್ ಕಲ್ಯಾಣ್ ಪತ್ನಿ

ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ಟ ಡಿಸಿಎಂ ಪವನ್ ಕಲ್ಯಾಣ್ ಪತ್ನಿ

ಆಂಧ್ರ ಪ್ರದೇಶ ಡಿಸಿಎಂ, ನಟ ಪವನ್ ಕಲ್ಯಾಣ್ ಪುತ್ರ ಸಿಂಗಾಪುರದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ. ಆಂಧ್ರದಿಂದ​ ಸಿಂಗಾಪುರಕ್ಕೆ ಹೋಗಿದ್ದ ಪವನ್, ಇದೀಗ ಪತ್ನಿ ಅನ್ನಾ ಲೆಜ್ನೆವಾ ಮತ್ತು ಮಕ್ಕಳನ್ನ ಅಲ್ಲಿಂದ ಸುರಕ್ಷಿತವಾಗಿ ವಾಪಸ್ ಕರೆತಂದಿದ್ದಾರೆ. ಈ ಘಟನೆ ನಡೆದ ಬೆನ್ನಲ್ಲೇ ಪತ್ನಿ ಅನ್ನಾ ಸೀದಾ ತಿರುಪತಿಗೆ ಭೇಟಿ ನೀಡಿ, ಪುತ್ರನ ಆರೋಗ್ಯ ಕ್ಷೇಮಕ್ಕಾಗಿ ಮುಡಿ ಕೊಟ್ಟಿದ್ದಾರೆ.

ಹೌದು, ಸಿಂಗಾಪುರದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪುತ್ರ ಮಾರ್ಕ್ ಶಂಕರ್ ಪವನೋವಿಚ್‌ ಗಾಯಗೊಂಡಿದ್ದ. 8 ವರ್ಷ ವಯಸ್ಸಿನ ಮಾರ್ಕ್‌ ಶಂಕರ್‌ಗೆ ಅಲ್ಲಿಯೇ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಸಿಂಗಾಪುರಕ್ಕೆ ಹೋಗಿದ್ದ ಪವನ್​ ಕಲ್ಯಾಣ್​, ಪತ್ನಿ ಮತ್ತು ಮಕ್ಕಳನ್ನ ಹೈದರಾಬಾದ್‌ಗೆ ಕ್ಷೇಮವಾಗಿ ಕರೆತಂದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments