Monday, June 23, 2025
26.6 C
Bengaluru
Google search engine
LIVE
ಮನೆಜಿಲ್ಲೆನಾಡದೇವತೆ ಚಾಮುಂಡೇಶ್ವರಿ ಈಗ ‘ಗೃಹಲಕ್ಷ್ಮಿ’

ನಾಡದೇವತೆ ಚಾಮುಂಡೇಶ್ವರಿ ಈಗ ‘ಗೃಹಲಕ್ಷ್ಮಿ’

ಮೈಸೂರು; ರಾಜ್ಯದ ಗ್ಯಾರಂಟಿ ಯೋಜನೆಗಳು ನೆರೆ ರಾಜ್ಯಗಳಲ್ಲೂ ಸದ್ದು ಮಾಡ್ತಿರೋ ಹೊತ್ತಲ್ಲಿ ನಾಡದೇವತೆ ಚಾಮುಂಡೇಶ್ವರಿಗೂ ಗ್ಯಾರಂಟಿ ಸ್ಕೀಂ ನ ಹಣ ಸಂದಾಯವಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಗೃಹಲಕ್ಷ್ಮಿ ಯೋಜನೆಯ 59 ತಿಂಗಳ ಹಣವನ್ನು ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದರು.


ರಕ್ಷಾ ಬಂಧನದ ದಿನ ಮೈಸೂರಿನಲ್ಲಿ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿತ್ತು. ಆಗ ಚಾಮುಂಡೇಶ್ವರಿಗೆ 2000 ರೂ. ಅರ್ಪಿಸಲಾಗಿತ್ತು. ಹೀಗೆ ದೇವರನ್ನೂ ಯೋಜನೆಯ ಫಲಾನುಭವಿ ಎಂಬಂತೆ ಸಂಭ್ರಮಿಸಲಾಗಿತ್ತು. ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವಂತೆ, ರಾಜ್ಯದ ಯಜಮಾನಿ ನಾಡದೇವತೆಗೆ 59 ತಿಂಗಳ ಒಟ್ಟು ಹಣ 1,18,000 ರೂ ಗಳನ್ನು ಸಂದಾಯ ಮಾಡಲಾಯಿತು. ಈ ಹಿಂದೆ ಪ್ರತಿ ತಿಂಗಳು ಚಾಮುಂಡಿ ದೇವಸ್ಥಾನಕ್ಕೆ ಯೋಜನೆಯ ಹಣ ನೀಡುವಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್​ ಅವರಿಗೆ ಎಂಎಲ್​ಸಿ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಬಳಿಕ ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಡಿಸಿಎಂ ಡಿಕೆ ಶಿವಕುಮಾರ್ ಸೂಚಿಸಿದ್ದರು. ಇದೀಗ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ವೈಯಕ್ತಿಕ ಹಣವನ್ನು ಗೃಹ ಲಕ್ಷ್ಮಿ ಯೋಜನೆ ಹೆಸರಲ್ಲಿ ತಾಯಿ ಚಾಮುಂಡೇಶ್ವರಿಗೆ ಅರ್ಪಿಸಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments