ವಿಜಯಪೂರ : ನಾನು ಬಿಜೆಪಿಗೆ ಮತ್ತೆ ಮರಳಿ ಬಂದೆ ಬರ್ತಿನಿ.ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರನನ್ನು ಕೆಳಗಿಳಿಸಿದರೆ ನಾನು ಬಿಜೆಪಿಗೆ ಬರುತ್ತೇನೆ ಎಂದು ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ನಾನು ರಾಜ್ಯದ ಯಾವ ನಾಯಕರ ಮನೆಗೂ ಹೋಗಿಲ್ಲ ,ಹೋಗೊದಿಲ್ಲ, ಹೋಗುವ ಅವಶ್ಯಕತೆ ನನಗಿಲ್ಲ ಎಂದು ಹೊಸ ಬಾಂಬ್ ಸಿಡಿಸಿದ ವಿಜಯಪೂರ ಶಾಸಕ ಯತ್ನಾಳ್.
ಬಿಜೆಪಿಯ ಹೈಕಮಾಂಡ್ ನಾಯಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ.ನನ್ನನ್ನೂ ಪಕ್ಷದ ವರಿಷ್ಠರು ಮತ್ತೆ ಬಿಜೆಪಿಗೆ ಕರೆಸಿಕೊಳ್ಳುವುದಾಗಿ ಹೇಳಿದ್ದಾರೆ .ನನ್ನನ್ನೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ರಾಜ್ಯದ ಮುಖಂಡರು ಸೇರಿದಂತೆ ಯಾರನ್ನೂ ಕೇಳಿಲ್ಲ,ಕೆಲವರಿಗೆ ಹುಚ್ಚು ಹಿಡಿದಿದೆ.ನನ್ನನ್ನೂ ಮತ್ತೆ ಪಕ್ಷಕ್ಕೆ ವಾಪಸ್ ತೆಗೆದುಕೊಳ್ಳಲ್ಲ ಎಂಬ ಭ್ರಮೆಯಲ್ಲಿದ್ದಾರೆ ಎಂದು ರಮೇಶ್ ಜಿಗಜಿಣಗಿಗೆ ವ್ಯಂಗ್ಯ ಮಾಡಿದ ಉಚ್ಚಾಟಿತ ಶಾಸಕ ಯತ್ನಾಳ್


