ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯಿಂದ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಘೋಷಣೆ ಮಹುವಾ ಮೊಯಿತ್ರಾ ಕಣದಲ್ಲಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರು ಮುಂಬರುವ ಲೋಕಸಭೆ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿಗಳನ್ನು ಭಾನುವಾರ (ಮಾರ್ಚ್ 10) ಘೋಷಿಸಿದ್ದಾರೆ.
ಭಾರತೀಯ ಬಣದ ಭಾಗವಾಗಿರುವ ಕಾಂಗ್ರೆಸ್ ಅನ್ನು ಬಿಟ್ಟು, ಟಿ.ಎಂ.ಸಿ ರಾಜ್ಯದಲ್ಲಿ ಲೋಕಾ ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. ಡೈಮಂಡ್ ಹಾರ್ಬರ್ ನಿಂದ ಅಭಿಷೇಕ್ ಬ್ಯಾನರ್ಜಿ ಟಿಕೆಟ್ ಪಡೆದಿದ್ದಾರೆ. ಲೋಕಸಭೆಯಿಂದ ಉಚ್ಛಾಟಿತರಾಗಿರುವ ಮಹುವಾ ಮೊಯಿತ್ರಾ ಅವರನ್ನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೃಷ್ಣನಗರ ಕ್ಷೇತ್ರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಮೊಯಿತ್ರಾ ಅವರು 2019 ರ ಚುನಾವಣೆಯಲ್ಲಿ ಕೃಷ್ಣನಗರ ಸ್ಥಾನವನ್ನು ಗೆದ್ದಿದ್ದರು. ಆದರೆ ನಗದು-ಪ್ರಶ್ನೆ ಹಗರಣದಲ್ಲಿ ಭಾಗಿಯಾಗಿದ್ದರಿಂದ ,17 ನೇ ಲೋಕಸಭೆಯಿಂದ ಅನರ್ಹಗೊಂಡರು. ಈಗ ಅದೇ ಕ್ಷೇತ್ರದಿಂದ ಮತ್ತೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.
ಮಾರ್ಚ್ 10 ರಂದು, ತೃಣಮೂಲ ಕಾಂಗ್ರೆಸ್ (ಟಿಎಂಸಿ) , ಪಶ್ಚಿಮ ಬಂಗಾಳದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 42 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಕೋಲ್ಕತ್ತಾದ ಬ್ರಿಗೇಡ್ ಮೈದಾನದಲ್ಲಿ ನಡೆದ ಬೃಹತ್ ರ್ಯಾಲಿಯಲ್ಲಿ ಅಭ್ಯರ್ಥಿಗಳ ಸಮಗ್ರ ಪಟ್ಟಿಯನ್ನು ಅನಾವರಣಗೊಳಿಸಲಾಗಿದೆ. ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬರ್ಹಾಂಪೋರ್ ಕ್ಷೇತ್ರಕ್ಕೆ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮ ನಿರ್ದೇಶನಗೊಂಡಿದ್ದು, ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಅಧೀರ್ ರಂಜನ್ ಚೌಧುರಿ ಎದುರಿನಲ್ಲಿ ಅವರು ಎದುರಿಸಲಿದ್ದಾರೆ. ಆದರೆ ಬಸಿರ್ಹತ್ ಸ್ಥಾನದ ಅಭ್ಯರ್ಥಿಗಳ ಪಟ್ಟಿಯಿಂದ ನಟಿ-ಕಮ್-ರಾಜಕಾರಣಿ ನುಸ್ರತ್ ಜಹಾನ್ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.



