Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಬಿಜೆಪಿ ನಾಯಕರೆಲ್ಲರು ಹೆಚ್‍ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್

ಬಿಜೆಪಿ ನಾಯಕರೆಲ್ಲರು ಹೆಚ್‍ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್

ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್‍ಐವಿ ಪೀಡಿತ ಮಹಿಳೆಯನ್ನು ಬಳಸಿಕೊಂಡು ತನ್ನ ರಾಜಕೀಯ ವಿರೋಧಿಗಳನ್ನು ಹಣಿಯಲು ಬಿಜೆಪಿ ಶಾಸಕ ಮುನಿರತ್ನ ಯತ್ನಿಸಿದ್ದರು ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಆದ್ದರಿಂದ, ಬಿಜೆಪಿ ನಾಯಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದರು.

ಹೆಚ್ಚೆಚ್ಚು ಜನರು ಸೇರುವ ಕಾರ್ಯಕ್ರಮಗಳಲ್ಲಿ ಜನರು ಶತ್ರುಗಳಿಗೆ ಸೋಂಕು ತಗುಲಿಸುತ್ತಾರೆಂಬುದು ಯಾರಿಗೂ ತಿಳಿದಿರುವುದಿಲ್ಲ. ವಿರೋಧ ಪಕ್ಷದ ನಾಯಕ ಆರ್ ಅಶೋಕ ಕೂಡ ಮುನಿರತ್ನ ಅವರ ಟಾರ್ಗೆಟ್ ಆಗಿದ್ದರು ಎಂದು ನಾನು ಕೇಳಿದ್ದೇನೆ. ಸಿರಿಯಾದಂತಹ ಯುದ್ಧ ಪೀಡಿತ ದೇಶಗಳಲ್ಲಿ ಜೈವಿಕ ಯುದ್ಧ ನಡೆದಿತ್ತು. ಅದನ್ನು ಬಿಜೆಪಿ ಶಾಸಕ ಮುನಿರತ್ನ ಅವರು ಕರ್ನಾಟಕಕ್ಕೆ ತಂದಿದ್ದಾರೆ.

ಸೋಂಕು ಹರಡಿಸುವವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಮುನಿರತ್ನ ನಮ್ಮ ಒಡನಾಡಿಯಾಗಿರಲಿಲ್ಲ. ಅವರು ಅಧಿಕಾರದ ಹಸಿವಿನ ವ್ಯಕ್ತಿ, ತಮ್ಮ ನಿಷ್ಠೆಯನ್ನು ಬದಲಾಯಿಸುತ್ತಲೇ ಇರುತ್ತಾರೆ ಎಂದು ವಾಗ್ದಾಳಿ ನಡೆಸಿದರು.

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments