Monday, June 23, 2025
26.6 C
Bengaluru
Google search engine
LIVE
ಮನೆ#Exclusive Newsಮೂಡಾ ಕೇಸ್ನಿಂದ ಸಿಎಂಗೆ ‘ಲೋಕಾ’ ಮುಕ್ತಿ..!

ಮೂಡಾ ಕೇಸ್ನಿಂದ ಸಿಎಂಗೆ ‘ಲೋಕಾ’ ಮುಕ್ತಿ..!

ಬೆಂಗಳೂರು: ಮೂಡಾ ಆರೋಪ  ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕೊನೆಗೂ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ. ಲೋಕಾಯುಕ್ತ ಎಸ್‌ಪಿ ಉದೇಶ್ ಅವರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ಗೆ 11,200 ಪುಟಗಳ ತನಿಖಾ ವರದಿಯನ್ನು ಸಲ್ಲಿಸಿದ್ದಾರೆ.

ಸಾಕ್ಷಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು 82ನೇ ಸಿಟಿ ಸಿವಿಲ್​ ಕೋರ್ಟ್​ನ ನ್ಯಾಯಾಧೀಶ ಸಂತೋಷ್​ ಗಜಾನನ ಭಟ್​ ಅವರಿಗೆ ಬಿ.ರಿಪೋರ್ಟ್​ ಸಲ್ಲಿಸಿದ್ದಾರೆ.

50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲು ಮಾಡಿರುವ ಲೋಕಾಯುಕ್ತ ಪೊಲೀಸರು 27 ಸಂಪುಟಗಳಲ್ಲಿ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್​ ಎಂದೇ ಉಲ್ಲೇಖಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಮುಡಾ ಅಕ್ರಮ ಆರೋಪ ಕೇಳಿ ಬಂದಾಗಿನಿಂದಲೂ ಕೊಂಚ ವಿಚಲಿತರಾಗಿದ್ದ ಸಿದ್ದರಾಮಯ್ಯ ಈಗ ನಿರಾಳಗಾರಿದ್ದಾರೆ. ಲೋಕಾಯುಕ್ತ ಅಧಿಕಾರಿಗಳಿಂದ  ಅಂತಿಮ ವರದಿಯನ್ನು ಪಡೆದ ನ್ಯಾಯಾಲಯ, ವಿಚಾರಣೆಯನ್ನು ಫೆ. 24ಕ್ಕೆ ಮುಂದೂಡಿದೆ. ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್​ ಅವರಿಗೆ ಕ್ಲೀನ್​ ಚಿಟ್​ ನೀಡಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments