Saturday, June 21, 2025
22.9 C
Bengaluru
Google search engine
LIVE
ಮನೆ#Exclusive NewsTop Newsಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್​ ಗಾಂಧಿ

ಮೋದಿ ಬೆಂಬಲಕ್ಕೆ ನಿಂತ ವಿಪಕ್ಷ ನಾಯಕ ರಾಹುಲ್​ ಗಾಂಧಿ

ಪಹಲ್ಗಾಮ್​ ದಾಳಿಯ ಕುರಿತಾಗಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ದರಾಗಿದ್ದೇವೆ ಎಂದು ವಿಪಕ್ಷ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ.

ಪಹಲ್ಗಾಮ್​ನಲ್ಲಿ ನಡೆದ ಉಗ್ರರ ಅಟ್ಟ ಹಾಸಕ್ಕೆ 28 ಜನ ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆ ಕುರಿತಾಗಿ ನಿನ್ನೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಸಲಾಯಿತು.ಈ ಸಭೆಯಲ್ಲಿ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡರು ನಾವು ಅದಕ್ಕೆ ಬದ್ದರಾಗಿರುತ್ತೇವೆ ಎಂದು ರಾಹುಲ್​ ಗಾಂಧಿ ಹೇಳಿದ್ದಾರೆ.

  • ಪಹಲ್ಗಾಮ್‌ ದಾಳಿಕೋರರ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುವ ಎಲ್ಲಾ ನಿರ್ಧಾರಗಳಿಗೆ ಬೆಂಬಲ ಘೋಷಿಸಿದ ವಿಪಕ್ಷ ಸದಸ್ಯರು.
  • ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮೋದಿ ಸರ್ಕಾರದ ಜೊತೆ ನಿಲ್ಲುವುದಾಗಿ ಭರವಸೆ ನೀಡಿದ ರಾಹುಲ್‌ ಗಾಂಧಿ.

ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, ‘ಪಹಲ್ಗಾಮ್‌ ಭಯೋತ್ಪಾದಕ ದಾಳಿ ಒಂದು ಅಮಾನವೀಯ ಘಟನೆ. ಈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಅಮಾಯಕ ನಾಗರಿಕರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗಿದ್ದೇವೆ. ಈ ದಾಳಿ ಕೈಗೊಂಡವರಿಗೆ ಉಗ್ರ ಶಿಕ್ಷೆಯಾಗಬೇಕಿದ್ದು, ಈ ವಿಚಾರದಲ್ಲಿ ಕೇಂದ್ರ ಸರ್ಕಾರಕ್ಕೆ ನಾವು ಸಂಪೂರ್ಣ ಬೆಂಬಲ ನೀಡುತ್ತೇವೆ‘ ಎಂದು  ರಾಹುಲ್​ ಗಾಂಧಿ ಸ್ಪಷ್ಟಪಡಿಸಿದ್ದಾರೆ.

 

 

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments