Wednesday, April 30, 2025
29.2 C
Bengaluru
LIVE
ಮನೆ#Exclusive Newsರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು  ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು ಇತ್ಯರ್ಥಕ್ಕೆ ಸಾಧ್ಯವಿರುವ ಎಲ್ಲಾ ನೆರವು ನೀಡಲು ಭಾರತ ಸಿದ್ದ’ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ರಷ್ಯಾ ನೆಲದಲ್ಲೇ ಶಾಂತಿ ಮಂತ್ರ ಜಪಿಸಿದ್ದಾರೆ.

16ನೇ ಬ್ರೀಕ್ಸ್​​​   ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮಂಗಳವಾರ ರಷ್ಯಾದ ಕಝಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ, ಈ ವೇಳೆ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ‘ರಷ್ಯಾ- ಉಕ್ರೇನ್ ಸಂಘರ್ಷವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು, ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ದ’ ಎಂದು ಭರವಸೆ ನೀಡಿದರು. ಇದಕ್ಕೂ ಮುನ್ನ ಕೂಡಾ ಮಾತನಾಡಿದ ಮೋದಿ, ‘ಇಡೀ ವಲಯದಲ್ಲಿ ಆದಷ್ಟು ಶೀಘ್ರ ಶಾಂತಿ ಮರುಸ್ಥಾಪನೆಯನ್ನು ಭಾರತ ಸಂಪೂರ್ಣವಾಗಿ ಬೆಂಬಲಿಸುತ್ತದೆ. ರಷ್ಯಾ – ಉಕ್ರೇನ್ ನಡುವಿನ ಸಂಘರ್ಷ ಸಂಬಂಧ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಈ ಮೊದಲೂ ಹೇಳಿದಂತೆ ಸಮಸ್ಯೆಗಳನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು ಎಂಬುದು ನಮ್ಮ ನಂಬಿಕೆ. ನಮ್ಮೆಲ್ಲಾ ಪ್ರಯತ್ನಗಳೂ ಮಾನವೀಯತೆಗೆ ಆದ್ಯತೆ ನೀಡುತ್ತವೆ. ಈ ಸಂಬಂಧ ಮುಂಬರುವ ದಿನಗಳಲ್ಲಿ ಎಲ್ಲಾ ರೀತಿಯ ಸಹಕಾರಕ್ಕೂ ಭಾರತ ಸಿದ್ದ. ಎಲ್ಲಾ ವಿಷಯಗಳನ್ನೂ ಚರ್ಚಿಸಲು ನಾವು ಅವಕಾಶ ಹೊಂದಿದ್ದೇವೆ’ ಎಂದು ಹೇಳಿದರು.

3 ತಿಂಗಳಲ್ಲಿ 2ನೇ ಭೇಟಿ: ಇದೇ ವೇಳೆ ಕಳೆದ 3 ತಿಂಗಳಲ್ಲಿ ರಷ್ಯಾಕ್ಕೆ ಎರಡನೇ ಭೇಟಿ ನೀಡುತ್ತಿರುವುದು, ಎರಡೂ ದೇಶಗಳ ನಡುವೆ ಆಪ್ತ ಸಮನ್ವಯ ಮತ್ತು ಆಳವಾದ ನಂಬಿಕೆಗೆ’ ಸಾಕ್ಷಿ ಎಂದು ಪ್ರಧಾನಿ ಮೋದಿ ಹೇಳಿದರು

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments