ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ. ಅವರ ಹೇಳಿಕೆಯನ್ನು ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸಿವೆ.ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್ವಾಡ್ ಇತ್ತೀಚಿಗೆ ಹೇಳಿಕೆ ನೀಡಿದ್ದರು.ಈ ಹೇಳಿಕೆ ಕುರಿತು ಇಂದು ಮಹಾರಾಷ್ಟ್ರದ ಅಮರಾವತಿಯಲ್ಲಿ ಪ್ರತಿಕ್ರಿಯಿಸಿದ ಅನಿಲ್ ಬೋಂಡೆ, ನಾಲಿಗೆ ಕತ್ತರಿಸುವ ಮಾತುಗಳು ಸರಿಯಲ್ಲ. ಆದರೆ, ರಾಹುಲ್ ಗಾಂಧಿ ಮೀಸಲಾತಿ ವಿರುದ್ಧ ಹೇಳಿಕೆ ನೀಡಿರುವುದು ಅಪಾಯಕಾರಿ. ಹೀಗಾಗಿ ವಿದೇಶದಲ್ಲಿ ಅಸಂಬದ್ಧವಾಗಿ ಮಾತನಾಡುವವರ ನಾಲಿಗೆ ಕತ್ತರಿಸುವ ಬದಲಿಗೆ ಅದನ್ನು ಸೀಳಬೇಕು.