ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್ಐಟಿ) ತನಿಖೆಗೆ ಆದೇಶಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿಕೆ ಸಿಂಗ್ ಎಸ್ಐಟಿ ತನಿಖಾ ತಂಡದ ಮುಖ್ಯಸ್ಥರಾಗಿದ್ದಾರೆ. ಮುನಿರತ್ನ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಎಸ್ಐಟಿ ತನಿಖೆ ನಡೆಸಲಿದೆ. ದಲಿತರು ಮತ್ತು ಒಕ್ಕಲಿಗ ಸಮುದಾಯದ ವಿರುದ್ಧ ಜಾತಿ ನಿಂದನೆ ಹಾಗೂ ಗುತ್ತಿಗೆದಾರರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಅವರ ವಿರುದ್ಧ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.ಒಕ್ಕಲಿಗ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ವಿವರಣೆ ನೀಡಿದ್ದು, ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಇನ್ನೂ ಹಲವು ಸಂತ್ರಸ್ತರು ಬರಲಿದ್ದು, ಪ್ರಕರಣದ ಬೆಳವಣಿಗೆಗಳನ್ನು ನಿಭಾಯಿಸಲು ವಿಶೇಷ ವ್ಯವಸ್ಥೆ ಅಗತ್ಯವಿದೆ ಎಂದು ಹೇಳಿದ್ದಾರೆ.ಹಿರಿಯ ಐಪಿಎಸ್ ಅಧಿಕಾರಿ ಬಿಕೆ ಸಿಂಗ್ ಅವರು ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ತನಿಖೆ ನಡೆಸುತ್ತಿರುವ ಎಸ್ಐಟಿಯ ಮುಖ್ಯಸ್ಥರಾಗಿದ್ದರು.