ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ ಪೊಲೀಸರು ಶಾಸಕ ಮುನಿರತ್ನರವರಿಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದೆ. 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶ ಹೊರಡಿಸಿದೆ. ಗಾರೆ ಕೆಲಸದಿಂದ ಮಂತ್ರಿಪಟ್ಟಕ್ಕೇರಿದವನಿಗೆ ಮುಳುವಾದ ಮಾತು.ವೈಯಾಲಿಕಾವಲ್ ಪೊಲೀಸರಿಂದ ಮತ್ತೆ ಕಸ್ಟಡಿಗೆ ಮನವಿ,ಈ ವೇಳೆ ಶಾಸಕರ ಪರ ವಕೀಲರಿಂದ ಜಾಮೀನು ಅರ್ಜಿಗೆ ಮನವಿ,ಎರಡು ಕಡೆ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಸೆಪ್ಟಂಬರ್ 30ರ ತನಕ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿದ್ದಾರೆ.