#Exclusive NewsTop News

ಆನೆಯ ಹಣೆ ಮೇಲೆ 2 ಇಂಚಿನಷ್ಟು ಅಗಲದ ಗುಂಡಿನ ಗುರುತು ಪತ್ತೆ?: ದಂತಗಳು ನಾಪತ್ತೆ

ಭದ್ರಾ ಅಭಯಾರಣ್ಯದ ಹುಲಿ ಸಂರಕ್ಷಿತಾ ಅರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದ ಅಲ್ದಾರ ಸಮೀಪದ ಬೈರಾಪುರ ಹಿನ್ನೀರಿನ ದಟ್ಟಅರಣ್ಯ ಪ್ರದೇಶದಲ್ಲಿ ಆನೆಯ ಕಳೆಬರಹ ಪತ್ತೆಯಾಗಿದೆ.

ಚಿಕ್ಕಮಗಳೂರು (ಸೆ.26): ಜಿಲ್ಲೆಯ ತರೀಕೆರೆ ತಾಲೂಕಿನ ಭದ್ರಾ ಅಭಯಾರಣ್ಯದ ವ್ಯಾಪ್ತಿಯಲ್ಲಿ ಆನೆಯ ಕಳೆಬರಹ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಭದ್ರಾ ಅಭಯಾರಣ್ಯದ ಹುಲಿ ಸಂರಕ್ಷಿತಾ ಅರಣ್ಯ ವ್ಯಾಪ್ತಿಯ ಲಕ್ಕವಳ್ಳಿ ವಿಭಾಗದ ಅಲ್ದಾರ ಸಮೀಪದ ಬೈರಾಪುರ ಹಿನ್ನೀರಿನ ದಟ್ಟಅರಣ್ಯ ಪ್ರದೇಶದಲ್ಲಿ ಆನೆಯ ಕಳೆಬರಹ ಪತ್ತೆಯಾಗಿದೆ.

ಆನೆ ಸತ್ತ ಜಾಗದಲ್ಲಿ ದಂತಗಳು ನಾಪತ್ತೆ: ಆನೆ ಮೃತಪಟ್ಟು ಸುಮಾರು ಒಂದು ತಿಂಗಳು ಕಳೆದಿದೆ. ಆನೆಯ ಆಸ್ತಿ ಪಂಚರ ಸ್ಥಳೀಯ ಮೀನುಗಾರಿಗೆ ಕಂಡು ಬಂದಿದ್ದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆನೆ ತಲೆಯ ಹಣೆ ಭಾಗಕ್ಕೆ ಗುಂಡು ಹೊಡೆದಿರುವ ಗುರುತು ಪತ್ತೆಯಾಗಿದೆ. ಆನೆ ಹಣೆಯ ಮಧ್ಯ ಭಾಗದಲ್ಲಿ ಸುಮಾರು ಎರಡು ಇಂಚು ಅಗಲದ ಗುಂಡಿನ ರಂಧ್ರ ಎದ್ದು ಕಾಣುತ್ತಿದ್ದು, ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಆನೆ ದಂತಕ್ಕಾಗಿ ದಂತಚೋರರ ತಂಡ ಭದ್ರಾ ಅಭಯಾರಣ್ಯ ಭಾಗದಲ್ಲಿ ಸಕ್ರಿಯಾವಾಗಿದ್ಯಾ ಎಂಬ ಪ್ರಶ್ನೆ ಮೂಡಿದೆ.

ಅರಣ್ಯ ಇಲಾಖೆಯ ವಿರುದ್ದ ಪರಿಸರವಾದಿಗಳು ಕಿಡಿ: ಅರಣ್ಯ ಇಲಾಖೆಯ ಅಧಿಕಾರಿಗಳು ಆನೆಯ ಕಳೆಬರಹವನ್ನ ಸರಿಯಾಗಿ ತಪಾಸಣಾ ಮಾಡಿಲ್ಲ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. ಆನೆಯನ್ನು ದಂತಕ್ಕಾಗಿ ಹತ್ಯೆ ಮಾಡಿರುವ ಅನುಮಾನ ಸ್ಥಳೀಯರನ್ನ ಕಾಡುತ್ತಿದೆ. ಆದರೆ, ಆನೆ ಸತ್ತ ಜಾಗದಲ್ಲಿ ಆನೆಯ ಯಾವುದೇ ದಂತಗಳು ಕಂಡು ಬಂದಿಲ್ಲ. ಆನೆ ದಂತಗಳು ದಂತಚೋರರ ಪಾಲಾಗಿವೆ ಎನ್ನುವ ದಟ್ಟ ಅನುಮಾನ ಎಲ್ಲರನ್ನ ಕಾಡತೊಡಗಿದೆ.

 

Comments (0)

Your email address will not be published. Required fields are marked *

Back to top button