ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ, ಆರ್ಸಿಬಿ ಫ್ರಾಂಚೈಸಿ ಮತ್ತು ಕೆಎಸ್ಸಿಎ ಪರಿಹಾರ ಪ್ರಕಟಿಸಿವೆ
ಕಾಲ್ತುಳಿತ ಪ್ರಕರಣದಲ್ಲಿ ಮೃತರಾದ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ಮತ್ತು ಆರ್ಸಿಬಿ ಫ್ರಾಂಚೈಸಿ 10 ಲಕ್ಷ ರೂಪಾಯಿ ಪ್ರಕಟಿಸಿವೆ. ಅಲ್ಲದೇ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹೇಳಿದೆ. ಗಾಯಾಳುಗಳ ಚಿಕಿತ್ಸೆಗೆ ಆರ್ಸಿಬಿ ಕೇರ್ಸ್ ಫಂಡ್ ಶುರು ಮಾಡಿದೆ
ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, ಮಾತೇ ಬರ್ತಿಲ್ಲ, ಕರುಳು ಹಿಂಡುತ್ತಿದೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಆರ್ಸಿಬಿ ಮಾಜಿ ಆಟಗಾರ ಎಬಿ ಡಿವಿಲಿರ್ಸ್ ಕೂಡ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗಾಗಿ ಪ್ರಾರ್ಥಿಸುತ್ತೇನೆ ಅಂತಾ ಮರುಗಿದ್ದಾರೆ. ವಿರಾಟ್ ಕೊಹ್ಲಿ ಹೆಂಡತಿ, ನಟಿ ಅನುಷ್ಕಾ ಶರ್ಮಾ ಕೂಡ ಬ್ರೋಕನ್ ಹಾರ್ಟ್ ಎಮೋಜಿ ಹಾಕಿ ಕಾಲ್ತುಳಿದ ಘಟನೆಗೆ ಮರುಕ ವ್ಯಕ್ತಪಡಿಸಿದ್ದಾರೆ.