Friday, June 6, 2025
28 C
Bengaluru
Google search engine
LIVE
ಮನೆರಾಜ್ಯಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ಪರಿಹಾರ

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 20 ಲಕ್ಷ ಪರಿಹಾರ

ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಟ್ರೋಫಿ ಗೆದ್ದ ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ, ಆರ್​ಸಿಬಿ ಫ್ರಾಂಚೈಸಿ ಮತ್ತು ಕೆಎಸ್​ಸಿಎ ಪರಿಹಾರ ಪ್ರಕಟಿಸಿವೆ

ಕಾಲ್ತುಳಿತ ಪ್ರಕರಣದಲ್ಲಿ ಮೃತರಾದ ಕುಟುಂಬಗಳಿಗೆ ರಾಜ್ಯ ಸರ್ಕಾರ 10 ಲಕ್ಷ ಮತ್ತು ಆರ್​ಸಿಬಿ ಫ್ರಾಂಚೈಸಿ 10 ಲಕ್ಷ ರೂಪಾಯಿ ಪ್ರಕಟಿಸಿವೆ. ಅಲ್ಲದೇ ಗಾಯಗೊಂಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರ ಹೇಳಿದೆ. ಗಾಯಾಳುಗಳ ಚಿಕಿತ್ಸೆಗೆ ಆರ್​ಸಿಬಿ ಕೇರ್ಸ್ ಫಂಡ್ ಶುರು ಮಾಡಿದೆ

ಕಾಲ್ತುಳಿತ ದುರಂತದ ಬಗ್ಗೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, ಮಾತೇ ಬರ್ತಿಲ್ಲ, ಕರುಳು ಹಿಂಡುತ್ತಿದೆ ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ. ಆರ್​​ಸಿಬಿ ಮಾಜಿ ಆಟಗಾರ ಎಬಿ ಡಿವಿಲಿರ್ಸ್ ಕೂಡ ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರಿಗಾಗಿ ಪ್ರಾರ್ಥಿಸುತ್ತೇನೆ ಅಂತಾ ಮರುಗಿದ್ದಾರೆ. ವಿರಾಟ್​ ಕೊಹ್ಲಿ ಹೆಂಡತಿ, ನಟಿ ಅನುಷ್ಕಾ ಶರ್ಮಾ ಕೂಡ ಬ್ರೋಕನ್​ ಹಾರ್ಟ್​ ಎಮೋಜಿ ಹಾಕಿ ಕಾಲ್ತುಳಿದ ಘಟನೆಗೆ ಮರುಕ ವ್ಯಕ್ತಪಡಿಸಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments