Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಗಣರಾಜ್ಯೋತ್ಸವ: ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ

ಗಣರಾಜ್ಯೋತ್ಸವ: ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ ಮತ್ತು 19 ಜನ ಪೊಲೀಸರು ರಾಷ್ಟ್ರಪತಿ ಶ್ಲಾಘನೀಯ ಸೇವಾ ಪದಕಕ್ಕೆ ಪಾತ್ರರಾಗಿದ್ದಾರೆ.

ಶುಕ್ರವಾರ 76ನೇ ಗಣರಾಜ್ಯೋತ್ಸವ ಸಮಾರಂಭ ನಡೆಯಲಿದ್ದು, ಪದಕ ಪ್ರದಾನ ಮಾಡಲಾಗುತ್ತದೆ. ವಿಶಿಷ್ಟ ಸೇವೆಗಾಗಿ KSRP DIGP ಬಸವರಾಜ್ ಶರಣಪ್ಪ ಜಿಳ್ಳೆ, ಮತ್ತು ಕೆಎಸ್ ಆರ್ ಪಿ ತುಮಕೂರಿನ ಕಮಾಂಡೆಂಟ್ ಹಂಜಾ ಹುಸೇನ್ ಅವರಿಗೆ ರಾಷ್ಟ್ರಪತಿ ಪದಕ ಘೋಷಣೆಯಾಗಿದೆ.

ಬೆಂಗಳೂರಿನ DCRI DIGP ರೇಣುಕಾ ಕೆ ಸುಕುಮಾರ, ಪೊಲೀಸ್ ಪ್ರಧಾನ ಕಚೇರಿಯ ಎಐಜಿಪಿ ಸಂಜೀವ ಎಂ. ಪಾಟೀಲ್ ಅವರ ಗಮನಾರ್ಹ ಸೇವೆ ಗುರುತಿಸಿ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದೆ.

ಇನ್ನೂ ಕೊಪ್ಪಳದ ಮುನಿರಾಬದ್ ನ IRI ಕಮಾಂಡೆಂಟ್ ಬಿ.ಎಂ.ಪ್ರಸಾದ್, ಕೆಎಸ್ ಆರ್ ಪಿ ಹಾಸನ ಡೆಪ್ಯೂಟಿ ಕಮಾಂಡೆಂಟ್ ವೀರೇಂದ್ರ ನಾಯಕ್, ಬೆಂಗಳೂರು ಸಿಸಿಬಿ ಗೋಪಾಲ ಡಿ ಜೋಗಿನ, ಚಿಕ್ಕೋಡಿ ಉಪವಿಭಾಗದ ಡಿವೈಎಸ್ ಪಿ ಗೋಪಾಲಕೃಷ್ಣ ಬಿ ಗೌಡರ್, ಚಿತ್ರದುರ್ಗದ ಲೋಕಾಯುಕ್ತ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಗುರು ಬಸವರಾಜ , ಬೆಂಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ಹೆಚ್. ಜಯರಾಜ್, ಹಾಸನದ ಸರ್ಕಲ್ ಇನ್ಸ್ ಪೆಕ್ಟರ್ ಪ್ರದೀಪ್, ಬೆಂಗಳೂರು ನಗರ ಸಿಸಿಪಿ ಪೊಲೀಸ್ ಇನ್ಸ್ ಪೆಕ್ಟರ್ ಮೊಹಮ್ಮದ್ ಮುಕರಮ್, ಬ್ಯೂರ್ ಆಫ್ ಇಮಿಗ್ ರೇಷನ್ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎ. ವಸಂತ್ ಕುಮಾರ್, ಸಿಐಡಿ ಎಎಸ್ ಐ ಮಂಜುನಾಥ ಅವರು ಶ್ಲಾಘನೀಯ ಸೇವಾ ಪದಕ ಪುರಸ್ಕೃತರಾಗಿದ್ದಾರೆ.

ಬೆಂಗಳೂರಿನ ವಿಲ್ಸನ್ ಗಾರ್ಡನ್ ಎಎಸ್ ಐ ಅಲ್ತಾಪ್ ಹುಸೇನ್, ಕೆ.ಎಸ್. ಆರ್.ಪಿ ಬಲೇಂದ್ರನ್, ಕಲಬುರಗಿ ಡಿಐಜಿಪಿ ಅರುಣ ಕುಮಾರ, ಚಿಕ್ಕಮಗಳೂರಿನ ನಯಾಜ್ ಅಂಜುಮ್, ಡಿಸಿಪಿ ಶ್ರೀನಿವಾಸ, ರಾಜ್ಯ ಗುಪ್ತವಾರ್ತೆಯ ಅಶ್ರಪ್, ಕುಂದಾಪುರ ಠಾಣೆಯ ಸಿಹೆಚ್ ಸಿ ಬಿ. ಶಿವಾನಂದ ಅವರು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments