#Exclusive NewsTop Newsಜಿಲ್ಲೆಸುದ್ದಿ

ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ : ಹುಬ್ಬಳ್ಳಿಯ ಇತ್ತೀಚೆಗೆ ಗೃಹ ಬಳಕೆ ಸಿಲಿಂಡ‌ರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾದಾರಿಗಳು ಗಂಭೀರವಾಗಿ ಗಾಯಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, 9 ಜನರಲ್ಲಿ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಸಾವನ್ನಪ್ಪಿದ ಘಟನೆ ನಡೆದಿದೆ.

ಸಿಲಿಂಡರ್​​ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಗುರುವಾರ ಘೋಷಣೆ ಮಾಡಿದ್ದಾರೆ.

 

Comments (0)

Your email address will not be published. Required fields are marked *

Back to top button