Thursday, December 11, 2025
25.7 C
Bengaluru
Google search engine
LIVE
ಮನೆದೇಶ/ವಿದೇಶ7 ಕೋಟಿ ದರೋಡೆ ಕೇಸ್​: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ

7 ಕೋಟಿ ದರೋಡೆ ಕೇಸ್​: ಚೆನ್ನೈನಲ್ಲಿ ಆರೋಪಿಗಳ ಬಳಿ 6.3 ಕೋಟಿ ವಶ

ಬೆಂಗಳೂರು: ಎಟಿಎಂಗೆ ಹಣ ಪೂರೈಸುವ ವಾಹನವನ್ನು ಅಡ್ಡಗಟ್ಟಿ 7.11 ಕೋಟಿ ಹಣವನ್ನು ದರೋಡೆ ಮಾಡಿದ್ದ ಪ್ರಕರಣ ಬೆಂಗಳೂರು ಪೊಲೀಸರು ಭೇದಿಸಿದ್ದು, ಚೈನ್ನೈನಲ್ಲಿ ಸಿಕ್ಕಿಹಾಕಿಕೊಂಡ ಆರೋಪಿಗಳ ಬಳಿ 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ.. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ಹಣ, ಆರೋಪಿಗಳ ಪತ್ತೆಗೆ ಶೋಧ ಮುಂದುವರಿಸಿದ್ದಾರೆ.

ದರೋಡೆಕೋರರ ಬೆನ್ನಟ್ಟಿದ್ದ ಪೊಲೀಸರು ಚಿತ್ತೂರಿನಲ್ಲಿ ಇನ್ನೋವಾ ಕಾರನ್ನು ವಶಕ್ಕೆ ಪಡೆದಿದ್ದರು. ದರೋಡೆಕೋರರು ಈ ಕಾರನ್ನು ಕೃತ್ಯಕ್ಕೆ ಬಳಸಿದ್ದರು. ಕಾರು ವಶಕ್ಕೆ ಪಡೆದು ಬೆಂಗಳೂರಿಗೆ ತಂದು ಪರಿಶೀಲನೆ ನಡೆಸಿದ್ದರು. ಯುಪಿ ನೋಂದಣಿಯ ನಂಬರ್ ಪ್ಲೇಟ್ ಅಳವಡಿಸಿ ಗ್ಯಾಂಗ್ ಪರಾರಿಯಾಗಿತ್ತು.‌

ದರೋಡೆಕೋರರಿಗೆ ಇನ್ನೋವಾ ಕಾರು ಕೊಟ್ಟಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಚಿತ್ತೂರು ಗುಡಿಪಲ್ಲಿ ಬಳಿ ಪತ್ತೆಯಾಗಿದ್ದ ಕಾರು ಎಂಜಿನ್‌ನ ಚಾರ್ಸಿ ನಂಬರ್ ಆಧರಿಸಿ ಇಬ್ಬರನ್ನ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಕರಣ ದಾಖಲಿಸಿಕೊಂಡು ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು, ಗೋವಿಂದಪುರ ಠಾಣೆಯ ಕಾನ್‌ಸ್ಟೇಬಲ್ ಅಣ್ಣಪ್ಪನಾಯ್ಕ್, ಕೇರಳ ಮೂಲದ ದೇವಿಯರ್ ಇಬ್ಬರನ್ನು ಬಂಧಿಸಿದ್ದಾರೆ. ಬುಧವಾರ ರಾತ್ರಿಪಾಳಿಯಲ್ಲಿಯೇ ಇದ್ದ ಅಣ್ಣಪ್ಪನಾಯ್ಕ್ ಗುರುವಾರ ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

+ posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments