ರಾಜ್ಯಸುದ್ದಿ

ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ : ಆರೋಪಿ ಸುಳಿವು ಕೊಟ್ಟರೆ ₹10 ಲಕ್ಷ ಬಹುಮಾನ

ಬೆಂಗಳೂರು: ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಪೊಲೀಸರು, ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರು. ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ಪೊಲೀಸ್ ಆಯುಕ್ತ ಎಂಎನ್ ರೆಡ್ಡಿ ಅವರು, ಆರೋಪಿಗಳ ಬಗ್ಗೆ ತಿಳಿದಿದ್ದರೆ, ಅಥವಾ ಅವರ ಬಗ್ಗೆ ಸುಳಿವಿದ್ದರೆ ಯಾವುದೇ ರೀತಿಯ ಅಂಜಿಕೆ ಇಲ್ಲದೆ ನಮಗೆ ಮಾಹಿತಿ ನೀಡಿ. ಸುಳಿವು ನೀಡುವವರ ಕುರಿತು ಯಾವುದೇ ಕಾರಣಕ್ಕೂ ಮಾಹಿತಿ ಬಹಿರಂಗವಾಗದಂತೆ ನಾವು ನೋಡಿಕೊಳ್ಳುತ್ತೇವೆ. ಮಾಹಿತಿ ನೀಡಬಯಸುವವರು ಕೇಂದ್ರ ವಿಭಾಗದ ಡಿಸಿಪಿ ಅವರಿಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮೊಬೈಲ್ ಸಂಖ್ಯೆ 9480801101ಗೆ ಕರೆ ಮಾಡಬಹುದು ಎಂದು ಅವರು ಹೇಳಿದರು.

Comments (0)

Your email address will not be published. Required fields are marked *

Back to top button