ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.
ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಬೇಕು ಎಂದು ಘೋಷಣೆ ಕೂಗಿ, ತುಮಕೂರು ನಗರದ ಟೌನ್ ಹಾಲ್ ವೃತ್ತದಿಂದ ಪಂಜಿನ ಮೆರವಣಿಗೆ ಮಾಡಿದ್ರು. ನೂರಾರು ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ರು.

