Tuesday, June 24, 2025
25.1 C
Bengaluru
Google search engine
LIVE
ಮನೆಸುದ್ದಿರಾಮ ಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಯಲ್ಲಿ ಮೊದಲ ರಾಮನವಮಿ ; ಮೋದಿ ಸಂದೇಶ ಇಲ್ಲಿದೆ

ರಾಮ ಮಂದಿರ ನಿರ್ಮಾಣವಾದ ಬಳಿಕ ಅಯೋಧ್ಯೆಯಲ್ಲಿ ಮೊದಲ ರಾಮನವಮಿ ; ಮೋದಿ ಸಂದೇಶ ಇಲ್ಲಿದೆ

ಅಯೋಧ್ಯೆಯ ರಾಮ ಮಂದಿರವು ದೀಪಾಲಂಕೃತವಾಗಿದೆ, ರಾಮನವಿಮಗೆ ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ಬೆಳಗ್ಗೆ 3 ಗಂಟೆಯಿಂದಲೇ ರಾಮನವಮಿ ಕಾರ್ಯಕ್ರಮಗಳು ಶುರುವಾಗಿವೆ. ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ರಾಮನವಮಿ ಆಚರಿಸುತ್ತಿದ್ದು ತುಂಬಾ ವಿಶೇಷವಾಗಿರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮಾಡಿದ್ದಾರೆ.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ರಾಮನವಮಿ ಆಚರಿಸಲಾಗುತ್ತಿದೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಎಕ್ಸ್​ನಲ್ಲಿ ಪೋಸ್ಟ್​ ಮಾಡಿದ್ದು ಜನತೆಗೆ ರಾಮನವಮಿ ಶುಭಾಶಯ ತಿಳಿಸಿದ್ದಾರೆ. ಅವರು ಸರಣಿ ಟ್ವೀಟ್​ ಮಾಡಿ, ಈ ವರ್ಷದ ಆರಂಭದಲ್ಲಿ ರಾಮ ಮಂದಿರ ಉದ್ಘಾಟನೆ ನೆರವೇರಿಸಲಾಯಿತು ಇದಾದ ಬಳಿಕ ಇದು ಮೊದಲ ರಾಮನವಮಿ ಆಚರಣೆ ಮಾಡಲಾಗುತ್ತಿದೆ. ಐದು ಶತಮಾನಗಳ ಕಾಯುವಿಕೆಯ ನಂತರ ಇಂದು ಅಯೋಧ್ಯೆಯಲ್ಲಿ ಈ ರೀತಿ ರಾಮನವಮಿಯನ್ನು ಆಚರಿಸುವ ಸೌಭಾಗ್ಯ ನಮಗೆ ಸಿಕ್ಕಿದೆ.

ಮೋದಿ ಪೋಸ್ಟ್​

ಮಂದಿರ ಉದ್ಘಾಟನೆಯಾದ ಬಳಿಕ ಆಚರಿಸುತ್ತಿರುವ ಮೊದಲ ರಾಮನವಮಿ ಆಗಿರುವ ಕಾರಣದಿಂದ ಹೆಚ್ಚಿನ ಸಂಖ್ಯೆ ರಾಮಭಕ್ತರು ಸೇರುವ ನಿರೀಕ್ಷೆಯಿದೆ. ರಾಮನವಮಿ ಸಂಭ್ರಮದಲ್ಲಿ ಅಯೋಧ್ಯೆಗೆ 40 ಲಕ್ಷ ಜನ ಭಕ್ತರು ಬರುವ ನಿರೀಕ್ಷೆಯಿದೆ. ಇಂದು ರಾಮನಿಗೆ ಉಣಬಡಿಸಲು 56 ಬಗೆಯ ಭೋಗ್ ಪ್ರಸಾದಗಳನ್ನು ಸಿದ್ಧಪಡಿಸಲಾಗುತ್ತಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments