Wednesday, January 28, 2026
27.9 C
Bengaluru
Google search engine
LIVE
ಮನೆಸುದ್ದಿಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು !

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು !

ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12 )ಸಾವನ್ನಪ್ಪಿದ್ದ ಮಕ್ಕಳು. ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ. ಶಾಲೆಗೆ ರಜೆ ಇರುವುದರಿಂದ ಕೆರೆಗೆ ಐವರು ಬಾಲಕರು ಈಜಲು ತೆರಳಿದ್ದರು. ಈ ಪೈಕಿ ಓರ್ವ ಬಾಲಕ ಪಾರಾಗಿ ಸಮೀಪದಲ್ಲಿದ್ದವರಿಗೆ ತಿಳಿಸಿದ್ದಾನೆ. ನಿವಾಸಿಗಳು ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮೃತಪಟ್ಟಿದ್ದಾರೆ.

ಮಕ್ಕಳ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿದ ಶೋಧಕಾರ್ಯ ನಡೆಸುತ್ತಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments