ಮಂಡ್ಯ : ಬಿಗ್ಬಾಸ್ ಖ್ಯಾತಿಯ ಸ್ಟಾರ್ಗಳಾದ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ರೀಲ್ಸ್ ರಾಣಿ ನಿವೇದಿತಾ ಗೌಡ ಡಿವೋರ್ಸ್ ಬೆನ್ನಲ್ಲಿಯೇ ಒಳ್ಳೆ ಹುಡುಗ ಪ್ರಥಮ್ ಬುದ್ಧಿಪಾಠ ಹೇಳಿದ್ದಾರೆ. ಲವ್ ಮ್ಯಾರೇಜ್ ಆದರೆ ನಮ್ಮ ಜುಟ್ಟು ಅವರ ಕೈಲಿರುತ್ತದೆ. ಇವರಿಬ್ಬರೂ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ರಿತಿಕ್ ರೋಷನ್, ದೀಪಿಕಾ ಪಡುಕೋಣೆ ಆಗೋದಕ್ಕಾಗಲ್ಲ ಇಬ್ಬರೂ ಒಂದಾಗಬೇಕು. ಇವರನ್ನು ಒಂದುಗೂಡಿಸಲು ನಟ ಧ್ರುವ ಸರ್ಜಾ ಮಧ್ಯಸ್ಥಿಕೆವಹಿಸಬೇಕು ಎಂದು ನಟ ಒಳ್ಳೆಹುಡುಗ ಖ್ಯಾತಿಯ ಪ್ರಥಮ್ ಬುದ್ಧಿಪಾಠ ಹೇಳಿದ್ದಾ
ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ಪ್ರಥಮ್ ಅವರು, ನಿವೇದಿತಾಗೌಡ ಹಾಗೂ ಚಂದನ್ಶೆಟ್ಟಿ ಬೇರ್ಪಟ್ಟ ಮಾತ್ರಕ್ಕೆ ಅವರಿಬ್ಬರೂ ರಿತಿಕ್ ರೋಷನ್, ದೀಪಿಕಾ ಪಡುಕೋಣೆ ಥರ ಬೆಳೆಯಲು ಸಾಧ್ಯವಾಗುತ್ತದೆಯೇ.? ಇವರಿಗೆ ಒಂದು ಶೋ ಮುಖ್ಯಾನ ಜೀವನ ಮುಖ್ಯಾನ.? ಜೀವನವೇ ಮುಖ್ಯ, ಇಬ್ಬರೂ ಚೆನ್ನಾಗಿ ಬದುಕಬೇಕು. ಇವರು ಪ್ರೀತಿ ಮಾಡಿ ಮದುವೆ ಮಾಡಿಕೊಳ್ಳುವಾಗ ಪರಸ್ಪರ ಕೆರಿಯರ್ ಬಗ್ಗೆ ಯೋಚಿಸದೆ ಇಬ್ಬರು ಮದುವೆ ಆದ್ರಾ? ಎಲ್ಲವನ್ನು ಯೋಚಿಸಿಯೆ ಅವರು ಮದುವೆ ಆಗಿದ್ದಾರೆ. ಬದುಕು ಸುಂದರವಾಗಿದ್ದು, ಇಬ್ಬರು ಚೆನ್ನಾಗಿ ಬದುಕುಬೇಕು ಎಂದು ಹೇಳಿದರು.
ಸಿನಿಮಾ ಇಂಟಸ್ಟ್ರಿಯಲ್ಲಿ ನಟ ಧ್ರುವ ಸರ್ಜಾ ಅವರ ಮಾತನ್ನ ಚಂದನ್ ಕೇಳ್ತಾರೆ. ಹೀಗಾಗಿ, ನಿವೇದಿತಾ ಹಾಗೂ ಚಂದನ್ ವಿಚ್ಛೇದನ ವಿಚಾರದಲ್ಲಿ ಧ್ರುವ ಸರ್ಜಾ ಮಧ್ಯಸ್ಥಿಕೆ ವಹಿಸಲಿ. ಚಂದನ್ಗೆ ಒಳ್ಳೆದಾಗಲಿ ಎಂದು ಧ್ರುವ ಪೊಗರು ಸಿನೆಮಾದಲ್ಲಿ ಚಾನ್ಸ್ ಕೊಟ್ಟರು. ಪ್ರೀತಿ ಇದ್ದರೆ ಚಂದನ್ ಧ್ರುವ ಮಾತನ್ನ ಕೇಳ್ತಾರೆ. ಮಿಲನ ಸಿನೆಮಾದಲ್ಲಿಯೂ ವಿಚ್ಚೇದನ ಬಳಿಕವೂ ಒಂದಾಗಲ್ವಾ? ಇಚ್ಛಾಶಕ್ತಿ ಮುಂದೆ ಬೇರಾವುದು ದೊಡ್ಡದಲ್ಲ. ಬೇಕಾದರೆ ಮಿಲನ ಫಿಲ್ಮ್ ಕ್ಲೈಮ್ಯಾಕ್ಸ್ ಕಟ್ ಮಾಡಿ ಚಂದನ್ಗೆ ಕಳಿಸುತ್ತೇನೆ. ಅದನ್ನ ನೋಡಿಯಾದರೂ ಚಂದನ್ ಮನಸ್ಸು ಬದಲಾಗಲಿ ಎಂದು ತಿಳಿಸಿದರು.
Phone Number : +91-9164072277
Email id : salesatfreedomtv@gmail.com