Top Newsಕ್ರೈಂ ಸ್ಟೋರಿಸುದ್ದಿ

ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ ರೌಡಿಶೀಟರ್ ತಂದೆ ಅಳಲು

ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್ ಬೇಫಾರಿ, ಅಪ್ತಾಭ್ ಗ್ಯಾಂಗ್ ನಡುವೆ ವಾರ್ ನಡೆದಿದ್ದು, ಹಳೇ ದ್ವೇಷದ ಹಿನ್ನಲೆ ಜಾವೂರ್ ಮೇಲೆ ಅಪ್ತಾಭ್ ಅಟ್ಯಾಕ್ ಮಾಡಿದ್ದ. ಕೊಲೆ ಮಾಡಲು ಯತ್ನಿಸಿ ಪರಾರಿಯಾಗಲು ಯತ್ನ ಮಾಡಿದ್ದಾನೆ. ಈ ವೇಳೆ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದ. ಹೀಗಾಗಿ ಕಸಬಾಪೇಟೆ ಪೊಲೀಸರು ಅಪ್ತಾಭ್ ಕಾಲಿಗೆ ಗುಂಡು ಹೊಡೆದಿದ್ದರು.

ಗುಂಡುಹೊಡೆದ ನಂತರ ಹುಧಾ ಪೊಲೀಸ್ ಕಮೀಷನರ್ ಶಶಿಕುಮಾರ್ ಆರೋಪಿ ಮನೆಗೆ ಭೇಟಿ ನೀಡಿದ್ದರು. ಆರೋಪಿ ತಂದೆ ಮಹಮ್ಮದ್ ಗೌಸ್‌ನ್ನು ಜೊತೆ ಮಾತನಾಡಿದ್ದರು.

ಮಕ್ಕಳಿಬ್ಬರು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದಕ್ಕೆ ತಂದೆ ಕಣ್ಣೀರು ಹಾಕಿದ್ದಾರೆ. ಮಕ್ಕಳಿಂದ ಮರ್ಯಾದೆ ಹೋಗಿದೆ. ಅವರನ್ನು ಗುಂಡು ಹೊಡೆದು ಸಾಯಿಸಿ ಬಿಡಿ ಎಂದು ಕಮೀಷನರ್ ಮುಂದೆ ಕಣ್ಣೀರು ಹಾಕಿ ಬೇಸರ ವ್ಯಕ್ತಪಡಿಸಿದರು. ಮಕ್ಕಳಿಗೆ ಬುದ್ಧಿ ಹೇಳಿ, ಇಲ್ಲದಿದ್ದರೆ ನಾವೇ ಹೇಳುತ್ತೇವೆ ಎಂದು ಕಮೀಷನರ್ ಪೋಷಕರಿಗೆ ಧೈರ್ಯ ತುಂಬಿದ್ದಾರೆ.

Comments (0)

Your email address will not be published. Required fields are marked *

Back to top button