Wednesday, April 30, 2025
30.3 C
Bengaluru
LIVE
ಮನೆ#Exclusive NewsTop Newsಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್

ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್‌ ಜೈಲಿನಲ್ಲಿರೋದು ಎನ್ನಲಾದ ಫೋಟೋವೊಂದು ವೈರಲ್​ ಆಗಿದೆ.

ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್ ಮೇಲಿದೆ. ಹಾಗಾಗಿ ಅವರನ್ನು ಪರಪ್ಪನ ಅಗ್ರಹಾರದ ಸ್ಪೆಷಲ್​ ಬ್ಯಾರಕ್​ನಲ್ಲಿ ಇರಿಸಲಾಗಿದೆ. ಅಲ್ಲಿ ಅವರು ಆರಾಮಾಗಿ ದಿನ ಕಳೆಯುತ್ತಿರುವಂತಿದೆ. ದರ್ಶನ್​ ಅವರು ಸ್ಪೆಷಲ್​ ಬ್ಯಾರಕ್​ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್​ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್​ ಕೂಡ ಇದೆ. ಈ ಫೋಟೋ ವೈರಲ್​ ಆಗಿದೆ. ಇನ್ನೂ ಯಾವೆಲ್ಲ ಸೌಕರ್ಯಗಳನ್ನು ನಟನಿಗೆ ನೀಡಿರಹುದು ಎಂಬ ಪ್ರಶ್ನೆಯನ್ನು ಈ ಫೋಟೋ ಹುಟ್ಟುಹಾಕಿದೆ. ಜೈಲು ಅಧಿಕಾರಿಗಳ ನಡೆಯ ಬಗ್ಗೆ ಅನುಮಾನ ಮೂಡುವಂತಾಗಿದೆ.

ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್‌ರನ್ನ ವಿಐಪಿ ಸೆಕ್ಯುರಿಟಿ ಸೆಲ್‌-1ನಲ್ಲಿ ಹಾಗೂ ರೌಡಿ ಶೀಟರ್‌ ವಿಲ್ಸನ್‌ಗಾರ್ಡನ್‌ ನಾಗನನ್ನ ಬ್ಯಾರಕ್ 3 ರಲ್ಲಿ ಇರಿಸಲಾಗಿದೆ. ಹೀಗಿದ್ದರೂ ಜೈಲಲ್ಲಿ ದರ್ಶನ್-ನಾಗನ ಭೇಟಿಯಾಗಿದೆ. ಇಬ್ಬರೂ ಜೈಲಲ್ಲಿ ಕೂತು ಕಾಲಹರಣ ಮಾಡಿದ್ದಾರೆ ಎನ್ನಲಾಗಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments