ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಕಡಿಯಾಗುತ್ತಿದೆ. ಒಂದಲ್ಲ ಒಂದು ಕಾರಣಕ್ಕೆ ಕನ್ನಡ ಮಾದ್ಯಮ ಶಾಲೆಗಳು ಬಂದ್ ಆಗುತ್ತಿವೆ. ಇದು ಸರ್ಕರಿ ಶಾಲೆಗಳ ಪ್ರಗತಿ ಫಲಿತಾಂಶದ ಕುಸಿತಕ್ಕೆಕಾರಣವಾಗಿದೆ. ಹೀಗಾಗಿ ಈ ಬಗ್ಗೆ ತಲೆ ಕೆಡಿಸಿಕೊಂಡಿರುವ ಸರ್ಕಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಕ್ಕಳನ್ನ ಶಾಲೆಗೆ ಕರೆ ತರವು ಟಾಸ್ಕ್ ನೀಡಿದೆ.ಕೊರೊನಾ ಬಳಿಕ ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸ್ಥಿತಿ ಅದೋಗತಿ ಎನ್ನುವಂತಾಗಿದೆ. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣದ ಜೊತೆಗೆ ಮೂಲಭೂತ ಸೌಲಭ್ಯಗಳು ಮೂಲೆಗುಂಪಾಗಿವೆ. ವರ್ಷದಿಂದ ವರ್ಷಕ್ಕೆ ರಾಜ್ಯದ ಸರ್ಕಾರಿ ಶಾಲೆಗಳು ಅವನತಿ ಹಾದಿ ಹಿಡದಿದ್ದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಕುಸಿತಕ್ಕೆ ಕಾರಣವಾಗುತ್ತಿದೆ. ಹೀಗಾಗಿ ಇಲಾಖೆ ಅಧಿಕಾರಿಗಳಿಗೆ ಚಾಟಿ ಬೀಸಿದೆ.
ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಕ್ಕಳನ್ನ ಶಾಲೆಗೆ ಕರೆ ತರವು ಟಾಸ್ಕ್
ಕೊವಿಡ್ ಬಳಿಕ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹಾಗೂ ಹಾಜರಾತಿ ಎರಡು ತಪ್ಪು ಹಾದಿ ಹಿಡಿದಿವೆ. ಒಂದಲ್ಲ ಒಂದು ಕಾರಣಕ್ಕೆ ಕನ್ನಡ ಮಾದ್ಯಮ ಶಾಲೆಗಳು ಬಂದ್ ಆಗುತ್ತಿವೆ. ಶೂನ್ಯ ದಾಖಲಾತಿ, ಮಕ್ಕಳ ದಾಖಲಾತಿ ಕೊರತೆ, ಶಿಕ್ಷಕರ ಕೊರತೆಗಳಿಂದಲೋ ಅಥವಾ ಪೋಷಕರ ತಪ್ಪಿನಿಂದಲೋ ಮಕ್ಕಳು ಶಾಲೆಗೆ ಸರಿಯಾಗಿ ಬರ್ತಿಲ್ಲ. ಇದು ಸರ್ಕರಿ ಶಾಲೆಗಳ ಪ್ರಗತಿ ಫಲಿತಾಂಶದ ಕುಸಿತಕ್ಕೆ ಕಾರಣವಾಗಿದೆ. ಹೀಗಾಗಿ ಈ ಬಗ್ಗೆ ತಲೆ ಕೆಡಿಸಿಕೊಂಡಿರುವ ಸರ್ಕಾರ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮಕ್ಕಳನ್ನ ಶಾಲೆಗೆ ಕರೆ ತರವು ಟಾಸ್ಕ್ ನೀಡಿದೆ.