ಜಿಲ್ಲೆರಾಜ್ಯಸುದ್ದಿ

ಗಣೇಶ ಮೂರ್ತಿ ವಿಸರ್ಜನೆಗಾಗಿ ಸಂಚಾರಿ ವಾಹನ(ಮೊಬೈಲ್ ಟ್ಯಾಂಕ್)/ಕಲ್ಯಾಣಿ ಗಳ ವ್ಯವಸ್ಥೆ ಮಾಡಿರುವ ಕುರಿತು:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗಾಗಿ ಅನುಮತಿ ಪಡೆಯಲು 63 ಏಕಗವಾಕ್ಷಿ ಕೇಂದ್ರಗನ್ನು ತೆರೆಯಲಾಗಿದೆ.

ಗಣೇಶ ಮೂರ್ತಿಗಳ ವಿಸರ್ಜನೆಗಾಗಿ 41 ಕೆರೆ ಅಂಗಳದ ಶಾಶ್ವತ/ತಾತ್ಕಾಲಿಕ ಕಲ್ಯಾಣಿಗಳು, 462 ತಾತ್ಕಾಲಿಕ ಮೊಬೈಲ್ ಟ್ಯಾಂಕ್ ಗಳ ವ್ಯವಸ್ಥೆಯನ್ನು ಪಾಲಿಕೆಯ ಎಲ್ಲಾ ವಾರ್ಡ್ ಗಳಲ್ಲಿ ಮಾಡಲಾಗಿರುತ್ತದೆ.

ಮುಂದುವರಿದು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ಮೇಲ್ವಿಚಾರಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅದರ ಸಂಪೂರ್ಣ ವಿವರಗಳಿಗಾಗಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಪಾಲಿಕೆ ವೆಬ್ ಸೈಟ್ ಲಿಂಕ್ https://apps.bbmpgov.in/ganesh2024/ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು. ಸದರಿ ಮಾಹಿತಿಯನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಮಾಧ್ಯಮಗಳಲ್ಲಿ ಪ್ರಕಟಿಸಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಪ್ರತಿಗಳನ್ನು ಲಗತ್ತಿಸಲಾಗಿದೆ.

 

 

Comments (0)

Your email address will not be published. Required fields are marked *

Back to top button