ಪಂಪಾಸರೋವರ ವಿಜಯಲಕ್ಷ್ಮಿದೇವಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷ ವಾಗಿದೆ. ಇನ್ನು ದೇವಸ್ಥಾನದ ಎದುರು ಮಲಗಿದ್ದ ನಾಯಿ ಎಳೆದೊಯ್ದ ಚಿರತೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಗಾವತಿ ತಾಲೂಕಿನ ಪಂಪಾಸರೋವರ ದೇವಸ್ಥಾನದಲ್ಲಿ ಘಟನೆ ನಡೆದಿದ್ದು, ಐತಿಹಾಸಿಕ ಪ್ರಸಿದ್ಧ ಪಂಪಾಸರೋವರಕ್ಕೆ ಪ್ರತಿನಿತ್ಯ ಸಾವಿರಾರು ಜನರು ಪ್ರವಾಸಿಗರು, ಭಕ್ತರು ಆಗಮಿಸುತ್ತಾರೆ. ಇಲ್ಲಿ ಇದೀಗ ಚಿರತೆ ಪ್ರತ್ಯೇಕ್ಷ ಆಗಿದ್ದು, ಭಕ್ತರಲ್ಲಿ ಆತಂಕ ಶುರುವಾಗಿದೆ.