ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ವಿಧಾನಸಭೆಯ ಸದಸ್ಯರಾದ 94 ವರ್ಷದ ಶಾಮನೂರು ಶಿವಶಂಕರಪ್ಪರವರು ಅವಿರೋಧವಾಗಿ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸೆ.11ರಂದು ನಾಮ ಸಲ್ಲಿಸಲು ಅವಕಾಶ ನೀಡಿತ್ತು.ಶಾಮನೂರು ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಬಿ. ದ್ಯಾಬೇರಿ ಅವರು ಭಾನುವಾರ ತಿಳಿಸಿದ್ದಾರೆ.ಸತಸ 3ನೇ ಬಾರಿಗೆ ವೀರಶೈವ ಸಂಘಕ್ಕೆ ಶಾಮನೂರು ಶಿವಶಂಕರಪ್ಪರವರು ಅಧ್ಯಕ್ಷ ಅಧಿಕಾರ ಸ್ವೀಕರಿಸಲಿದ್ದಾರೆ.