ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ ಸಹಿತ ಬಹಿರಂಗಪಡಿಸಿದೆ. ಈ ಬಗ್ಗೆ ಟಿಡಿಪಿ ನಾಯಕ ಆನಂ ವೆಂಕಟ ರಮಣ ರೆಡ್ಡಿ ಅವರು ತುಪ್ಪವನ್ನು ಪರೀಕ್ಷಿಸಿದ ವಿವಿಧ ಪ್ರಯೋಗಾಲಯಗಳ ವರದಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.ಈ ಆರೋಪಕ್ಕೆ ಸಂಬಂಧಿಸಿದಂತೆ ಈ ಕುರಿತ ವರದಿಯನ್ನು ಟಿಡಿಪಿ ಬಹಿರಂಗಪಡಿಸಿದೆ. ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ ಸಹಿತ ಬಹಿರಂಗಪಡಿಸಿದೆ. ಈ ಬಗ್ಗೆ ಟಿಡಿಪಿ ನಾಯಕ ಆನಂ ವೆಂಕಟ ರಮಣ ರೆಡ್ಡಿ ಅವರು ತುಪ್ಪವನ್ನು ಪರೀಕ್ಷಿಸಿದ ವಿವಿಧ ಪ್ರಯೋಗಾಲಯಗಳ ವರದಿಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.ಈತನ್ಮಧ್ಯೆ ಈ ವಿವಾದದ ಕೇಂದ್ರ ಬಿಂದುವಾದ ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಪರ ಅವರ ಸಹೋದರಿ, ಆಂಧ್ರದ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷೆ ವೈಎಎಸ್ ಶರ್ಮಿಳಾ ಧಾವಿಸಿದ್ದು, ತಿರುಪತಿಯ ಲಡ್ಡು ಪ್ರಸಾದವನ್ನು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸದ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವ ಆರೋಪದ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿ ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ವೈಎಸ್ ಶರ್ಮಿಳಾ ಅವರು ಈ ವಿಷಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ, ಅಲ್ಲದೇ, ಹಾಲಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ತಿರುಪತಿ ಲಡ್ಡು ವಿವಾದದ ವಿಷಯವನ್ನು ತುಂಬಾ ಸಾಂದರ್ಭಿಕವಾಗಿ ನಿಭಾಯಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.