Top Newsಸುದ್ದಿ

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಬೆಂಗಳೂರಿನಲ್ಲಿ ಎಫ್‌ಐಆರ್‌

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್  ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಮೂಲಕ‌ ಹಣ ಸುಲಿಗೆ ಆರೋಪಿಸಿ ಕೋರ್ಟ್‌ಗೆ ಆರ್ಜಿ ಸಲ್ಲಿಸಲಾಗಿದ್ದು, FIR ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಸಮ್ಮತಿ ನೀಡಿದೆ.

ಐಪಿಸಿ ಸೆಕ್ಷನ್‌ 156(3), 383, 120(ಬಿ) ಅಡಿ ಎಫ್​​ಐಆರ್ ದಾಖಲು ಮಾಡಲು ಕೋರ್ಟ್​ ಆದೇಶ ನೀಡಿದ್ದು, ಬೆಂಗಳೂರಿನ ತಿಲಕ್‌ನಗರ ಪೊಲೀಸರಿಗೆ ನ್ಯಾಯಾಲಯ ಆದೇಶ ನೀಡಿದೆ. ಆದರ್ಶ್ ಅಯ್ಯರ್ ಅವರು ಜನಾಧಿಕಾರ ಸಂಘರ್ಷ ಪರಿಷತ್ (ಜೆಎಸ್‌ಪಿ)ನ ಸಹ ಅಧ್ಯಕ್ಷರಾಗಿದ್ದು, ಎಲೆಕ್ಟೋರಲ್ ಬಾಂಡ್ ಮೂಲಕ ಬೆದರಿಸಿ ಸುಲಿಗೆ ಮಾಡಲಾಗುತ್ತಿದೆ ಅರ್ಜಿಯಲ್ಲಿ ಆರೋಪಿಸಿದ್ದರು.

ಚುನಾವಣಾ ಬಾಂಡ್​ಗಳ ಮೂಲಕ ಸುಲಿಗೆ ಮಾಡಲಾಗಿದೆ. ಹೀಗಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲು, ಬಿ.ವೈ.ವಿಜಯೇಂದ್ರ ವಿರುದ್ಧ ಜನಾಧಿಕಾರಿ ಸಂಘರ್ಷ ಪರಿಷತ್‌ನ(ಜೆಎಸ್​ಪಿ) ಆದರ್ಶ ಆರ್. ಐಯ್ಯ‌ರ್ ಅವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರು ಸಂಬಂಧ ವಿಚಾರಣೆ ನಡೆಸಿದ 42ನೇ ಎಸಿಎಂಎಂ ಕೋರ್ಟ್, ದೂರಿನ ಪ್ರತಿ & ದಾಖಲೆ ಠಾಣೆಗೆ ಕಳುಹಿಸಲು ಸೂಚಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನ ತಿಲಕ್​​ನಗರ ಠಾಣೆಗೆ ಕಳಿಸುವಂತೆ ಕೋರ್ಟ್​​ನ ಕಚೇರಿಗೆ 42ನೇ ಎಸಿಎಂಎಂ ಜಡ್ಜ್​ ಸೂಚನೆ ನೀಡಿದ್ದಾರೆ. FIR ನಿರೀಕ್ಷೆಯಲ್ಲಿ ಎಂದು ವಿಚಾರಣೆ ಅ.10ಕ್ಕೆ ಮುಂದೂಡಲಾಗಿದೆ.

Comments (0)

Your email address will not be published. Required fields are marked *

Back to top button