ಸಿದ್ದರಾಮಯ್ಯ ನನ್ನ ಮನೆ ದೇವರು, ಅವರಿಗೆ ದ್ರೋಹ ಮಾಡಿಲ್ಲ: ಮುಡಾ ಮರೀಗೌಡ

ನನ್ನ ಹೆತ್ತ ತಾಯಿ ಮೇಲಾಣೆ. ನನ್ನ ಮನೆ ದೇವರ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ. ನಾನು ಯಾವುದೇ ರೀತಿಯಲ್ಲೂ ಸಿದ್ದರಾಮಯ್ಯ ಅವರಿಗೆ ಅನ್ಯಾಯ ಮಾಡಿಲ್ಲ ಎಂದರು. ಸಿದ್ದರಾಮಯ್ಯ ಅವರೇ ನನ್ನ ಮನೆ ದೇವರು, ಅವರೇ ನನ್ನ ಹೈಕಮಾಂಡ್. ಅವರಿಗೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ನನಗೆ ಹೈಕಮಾಂಡ್ ಸಿದ್ದರಾಮಯ್ಯ ಅವರು. ಅವರು ಹೇಳಿದರೆ ಆ ಕ್ಷಣವೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದ ಮುಡಾ ಅಧ್ಯಕ್ಷ ಕೆ.ಮರೀಗೌಡ

ಮೈಸೂರು(ಅ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಪರಮಾತ್ಮ, ನನ್ನ ಮನೆ ದೇವರು. ಅವರಿಗೆ ಮತ್ತು ಅವರ ಕುಟುಂಬಕ್ಕೆ ದ್ರೋಹ ಮಾಡುವಂತಹ ಕೆಲಸವನ್ನು ನಾನು ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಧ್ಯಕ್ಷ ಕೆ. ಮರೀಗೌಡ ಸ್ಪಷ್ಟಪಡಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಹೆತ್ತ ತಾಯಿ ಮೇಲಾಣೆ. ನನ್ನ ಮನೆ ದೇವರ ಮೇಲೆ ಆಣೆ ಮಾಡಿ ಹೇಳುತ್ತಿದ್ದೇನೆ. ನಾನು ಯಾವುದೇ ರೀತಿಯಲ್ಲೂ ಸಿದ್ದರಾಮಯ್ಯ ಅವರಿಗೆ ಅನ್ಯಾಯ ಮಾಡಿಲ್ಲ ಎಂದರು. ಸಿದ್ದರಾಮಯ್ಯ ಅವರೇ ನನ್ನ ಮನೆ ದೇವರು, ಅವರೇ ನನ್ನ ಹೈಕಮಾಂಡ್. ಅವರಿಗೆ ಎಂದಿಗೂ ದ್ರೋಹ ಬಗೆಯುವ ಕೆಲಸ ಮಾಡಿಲ್ಲ. ನನಗೆ ಹೈಕಮಾಂಡ್ ಸಿದ್ದರಾಮಯ್ಯ ಅವರು. ಅವರು ಹೇಳಿದರೆ ಆ ಕ್ಷಣವೇ ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಅವರು ತಿಳಿಸಿದರು.




