ಬೆಳಗಾವಿ:ಚಿಕ್ಕೋಡಿ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಧಗಧಗಿಸಿದ ಕಾರ್.ಜೈನಾಪುರ ಗ್ರಾಮದ ಹೊರವಲಯದ ಬಳಿ ನಡೆದಿರುವ ಘಟನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮ.
ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕಾರ್ನಲ್ಲಿ ಕಾಣಿಸಿಕೊಂಡ ಬೆಂಕಿ.ಬೆಂಕಿಯ ತೀವ್ರತೆಗೆ ಸುಟ್ಟು ಕರಕಲಾದ ಓರ್ವ ವ್ಯಕ್ತಿ.ಪೈರೋಜ್ ಬಡಗಾಂವ(40) ಕಾರ್ನಲ್ಲಿದ್ದ ವ್ಯಕ್ತಿ ಎನ್ನಲಾಗ್ತಿದೆ.ಪೈರೋಜ್ ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನಿವಾಸಿ.ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ಮಾಡಿ ಪರಿಶೀಲನೆ.ಸುಟ್ಟ ಕಾರ್ ಹಾಗೂ ಮೃತದೇಹ ಪರಿಶೀಲಿಸುತ್ತಿರುವ FSL ಟೀಂ.ಇದು ಅಪಘಾತವೋ ಅಥವಾ ಕೊಲೆಯೋ ಎಂದು ಅನುಮಾನ ವ್ಯಕ್ತಪಡಿಸುತ್ತಿರುವ ಸ್ಥಳೀಯರು.ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.