Friday, September 12, 2025
20.8 C
Bengaluru
Google search engine
LIVE
ಮನೆ#Exclusive NewsTop Newsನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು...

ನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು ಬಳಸಿಕೊಳ್ಳಬೇಡಿ- ಸಮಂತಾ

ನವದೆಹಲಿ: ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ದೊಡ್ಡ ಬಿರುಕು ಮೂಡಿ ಮುರಿದುಬೀಳಲು ಬಿಆರ್‌ಎಸ್ ಮುಖಂಡ ಕೆಟಿಆರ್ ಅವರೇ ಮುಖ್ಯ ಕಾರಣ ಎಂದು ಸಚಿವೆ ಕೊಂಡಾ ಸುರೇಖಾ ಸ್ಫೋಟಕ ಆರೋಪ ಮಾಡಿದ್ದಾರೆ.

ಕೆಟಿಆರ್ ಬಳಿ ಹೋಗ್ಲಿಲ್ಲ ಅಂದ್ರೆ ಮನೆಯಲ್ಲಿ ಇರುವಂತಿಲ್ಲ ಎಂದು ಸಮಂತಾಗೆ ನಟ ನಾಗಾರ್ಜುನ ಬೆದರಿಕೆ ಹಾಕಿದ್ರೂ ಅಂತಾನೂ ಆಪಾದನೆ ಮಾಡಿದ್ದಾರೆ. ಅಷ್ಟೇ ಅಲ್ಲ, ರಕುಲ್‌ ಪ್ರೀತ್‌ ಸಿಂಗ್ ಸೇರಿ ನಟಿಯರು ಬೇಗ ಮದ್ವೆ ಮಾಡಿಕೊಂಡು ಫೀಲ್ಡ್ ತೊರೆಯಲು ಕೂಡ ಕೆಟಿಆರ್ ಕೊಟ್ಟ ಟಾರ್ಚರ್ ಕೂಡ ಕಾರಣ ಎಂದು ಕೊಂಡಾ ಸುರೇಖ ಹೇಳಿರುವ ಆಡಿಯೋ ಒಂದು ಸಿಕ್ಕಾಪಟ್ಟೆ ವೈರಲ್ ಆಗಿದೆ.

ಇದಕ್ಕೆ ನಟ ನಾಗಾರ್ಜುನ, ನಟಿ ಸಮಂತಾ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಸಚಿವೆ ಕೊಂಡಾ ಸುರೇಖಾ ಹೇಳಿಕೆಯನ್ನು ಖಂಡಿಸ್ತಿದ್ದೇನೆ. ರಾಜಕಾರಣದಿಂದ ದೂರ ಇರುವ ಸಿನಿ ಪ್ರಮುಖರನ್ನು ದಯಮಾಡಿ, ನಿಮ್ಮ ಎದುರಾಳಿಗಳನ್ನು ಟೀಕೆ ಮಾಡಲು ಬಳಸಿಕೊಳ್ಳಬೇಡಿ ಎಂದಿದ್ದು, ದಯಮಾಡಿ ಇತರರ ವೈಯಕ್ತಿಕ ವಿಷಯಗಳನ್ನು ಗೌರವಿಸಿ ಎಂದಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ನೀವು ಮಾಡಿರುವ ಆರೋಪಗಳು ಸಂಪೂರ್ಣ ಅಸಂಬದ್ಧ ಮತ್ತು ಸುಳ್ಳಿನಿಂದ ಕೂಡಿವೆ. ನಿಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ನಾಗಾರ್ಜುನ ಆಗ್ರಹಿಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments