Thursday, January 29, 2026
18 C
Bengaluru
Google search engine
LIVE
ಮನೆರಾಜ್ಯಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಮೂವರು ಆರೋಪಿಗಳು...

ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಮೂವರು ಆರೋಪಿಗಳು ಬಂಧನ!

ಬೆಂಗಳೂರು: ತಿಪಟೂರು ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಹನಿಟ್ರ್ಯಾಪ್ ಮಾಡಿ 6 ಕೋಟಿ ರೂ.ಗೆ ಬೇಡಿಕೆಯಿಟ್ಟ ಆರೋಪದಡಿ ಸಿಸಿಬಿ ಪೊಲೀಸರು ಮೂರು ಜನರನ್ನು ವಶಕ್ಕೆ ಪಡೆದಿದ್ದಾರೆ. ವಿದ್ಯಾ ಬಿರಾದರ, ಆಕೆಯ ಸಹಚರರಾದ ಗಗನ್, ಸೂರ್ಯನಾರಾಯಣ್ ಬಂಧಿತರು. ರುದ್ರಮುನಿ ಸ್ವಾಮಿಜಿಯ ಖಾಸಗಿ ವಿಡಿಯೋದ ಪೆನ್‌ಡ್ರೈವ್ ತೋರಿಸಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಒಟ್ಟು 6 ಕೋಟಿ ರೂ. ನೀಡುವಂತೆ ಬೇಡಿಕೆಯಿಟ್ಟಿದ್ದರು. ಕೊಡದಿದ್ದರೆ ಹಣ ಜಾಲತಾಣಗಳಲ್ಲಿ ಖಾಸಗಿ ವಿಡಿಯೋ ಹರಿಬಿಡುವುದಾಗಿ ಹಾಕಿದ್ದರು.ಷಡಕ್ಷರಿ ಮಠದ ಸ್ವಾಮೀಜಿಗೆ ತಕ್ಷಣಕ್ಕೆ 50 ಲಕ್ಷ ರೂ. ಹಣ ನೀಡುವಂತೆ ಕೇಳಿಕೊಂಡಿದ್ದರು ಎನ್ನಲಾಗಿದೆ. ಇತ್ತ ಷಡಕ್ಷರಿ ಮಠದ ರುದ್ರಮುನಿ ಸ್ವಾಮೀಜಿ ಸಿಸಿಬಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments