Top Newsಸುದ್ದಿ

ರೂ. 50 ಕೋಟಿಗೆ ಬೇಡಿಕೆ ಆರೋಪ; ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಉದ್ಯಮಿ ಹಾಗೂ ಜೆಡಿಎಸ್ ಸೋಶಿಯಲ್ ಮೀಡಿಯಾ ಉಪಾಧ್ಯಕ್ಷ ವಿಜಯ್ ಟಾಟಾ ಎಂಬುವರು ದೂರು ನೀಡಿದ್ದರು. ಈ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಎಫ್​ಐಆರ್​ನಲ್ಲಿ ಏನಿದೆ?

2018 ರಿಂದ ಜೆಡಿಎಸ್ ಪಕ್ಷದಿಂದ ಗುರುತಿಸಿಕೊಂಡಿದ್ದೇನೆ. ನನ್ನ ಕಾರ್ಯ ಅಭಿನಂದಿಸಿ ಪಕ್ಷದ ಸೋಷಿಯಲ್ ಮೀಡಿಯಾ ವಿಂಗ್ ಗೆ ಉಪಾಧ್ಯಕ್ಷನಾಗಿ ಮಾಡಿದ್ರು . ನಾನು ಉಪಾಧ್ಯಕ್ಷನಾದ ಬಳಿಕ ದೇವೇಗೌಡರು ,‌ಕುಮಾರಸ್ವಾಮಿ ಸೇರಿ ಸಭೆ ಮಾಡಿರುತ್ತೇವೆ. ಸಾಮಾಜಿಕ ಜಾಲತಾಣ ಸೇರಿದಂತೆ ಪಕ್ಷದ ಏಳಿಗೆ ಬಗ್ಗೆ ಚರ್ಚೆಗಳನ್ನ ನಡೆಸಿರುತ್ತೇವೆ. 2019 ರಲ್ಲಿ ಮಂಡ್ಯ ಲೋಕಸಭಾ ಎಲೆಕ್ಷನ್ ಸಂಧರ್ಭದಲ್ಲಿ ನಿಖಿಲ್ ಪರವಾಗಿ ಸಾಕಷ್ಟು ಅಭಿಯಾನ ಮಾಡಿದ್ದೇವೆ. ಈ ಅಭಿಯಾನಗಳಿಗೆ ನಾನು ವೈಯುಕ್ತಿಕವಾಗಿ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿದ್ದೇನೆ. ಇದಾದ ಬಳಿಕ ನಾನು ಕೆಲ ವರ್ಷಗಳಿಂದ ನನ್ನ ರಿಯಲ್ ಎಸ್ಟೇಟ್ ಉದ್ಯಮದ ಬಗ್ಗೆ ಗಮನ ಹರಿಸಿದ್ದೆ. ಹೀಗಾಗಿ ಪಕ್ಷದ ಕಾರ್ಯಗಳಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಕಳೆದ ಒಂದು ತಿಂಗಳು ನನ್ನ ಮನೆಗೆ ಆಗಮಿಸಿದ್ದ ಮಾಜಿ ಎಂಎಲ್ ಸಿ ರಮೇಶ್ ಗೌಡ , ಪಕ್ಷದ ಕಾರ್ಯಗಳಲ್ಲಿ ಪುನಃ ತೊಡಗಿಸಿಕೊಳ್ಳುವಂತೆ ಕೋರಿದ್ರು. ಕುಮಾರೆ ಪಕ್ಷದ ಸಂಘಟನೆಯ ಜವಾಬ್ಧಾರಿ ವಹಿಸಿಕೊಳ್ಳುವಂತೆ ಕೋರಿದ್ದರು.

ನಂತರ ರಮೇಶ್ ಗೌಡ ಆಗಸ್ಟ್ 24 2024 ರಂದು ರಾತ್ರಿ 10 ಗಂಟೆಗೆ ಮನೆಗೆ ಆಗಮಿಸಿದ್ದರು. ನಮ್ಮ ಜೊತೆಯಲ್ಲಿ ಕೂತು ಊಟ ಮಾಡುತ್ತಾ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ವಿವರಿಸತೊಡಗಿದ್ರು. ನಿಖಿಲ್ ಕುಮಾರಸ್ವಾಮಿಗೆ ಟಿಕೇಟ್ ನೀಡೋದು ಅಂತಿಮವಾಗಿದ್ದು , ಈ ಬಾರಿ ಚುನಾವಣಾ ಕಾರ್ಯದಲ್ಲಿ ಸಕ್ರಿಯವಾಗಿರಲು ಮನವಿ ಮಾಡಿದರು.

ಇದೇ ವೇಳೆ ತಮ್ಮ ಮೊಬೈಲ್ ನಿಂದ ಹೆಚ್ ಡಿ ಕುಮಾರಸ್ವಾಮಿ ಕರೆ ಮಾಡಿದ್ರು. ಕುಮಾರಸ್ವಾಮಿ ಜೊತೆಯಲ್ಲಿ ಮಾತನಾಡುತ್ತ ರಮೇಶ್ ಗೌಡ ನಮ್ಮ ಮನೆಗೆ ಬಂದಿರೋದಾಗಿ ತಿಳಿಸಿದರು. ಆನಂತರ ನನಗೆ ಕುಮಾರಸ್ವಾಮಿ ಜೊತೆ ಮಾತನಾಡಲು ಫೋನ್ ಕೊಟ್ಟರು. ಕುಶಲೋಪರಿ ವಿಚಾರಿಸಿದ ಕುಮಾರಸ್ವಾಮಿ ಚನ್ನಪಟ್ಟಣ ಉಪ ಚುನಾವಣೆ ಬಗ್ಗೆ ಪ್ರಸ್ತಾಪಿಸಿದ್ದರು. ಉಪ ಚುನಾವಣೆ ಅನಿವಾರ್ಯ ನಮಗೆ ಖರ್ಚಿಗೆ 50 ಕೋಟಿ ರೂಪಾಯಿ ಕೊಡಬೇಕಾಗುತ್ತೆ ಎಂದರು. ಸರ್ ನನ್ನ ಬಳಿ ಅಷ್ಟೊಂದು ಹಣವಿಲ್ಲ ಎಂದೆ. ನನ್ನ ಮಾತಿನಿಂದ ಕೋಪಗೊಂಡ ಕುಮಾರಸ್ವಾಮಿ 50 ‌ಕೋಟಿ ರೆಡಿ ಮಾಡು ಇಲ್ಲದೆ ಹೋದರೆ ನಾನೇನ್ ಮಾಡುತ್ತೇನೇ ಗೊತ್ತಿಲ್ಲ ಎಂದು ಬೆದರಿಕೆ ಹಾಕಿದ್ರು.

ಅಷ್ಟೇ ಅಲ್ಲದೇ ಬೆಂಗಳೂರಿನಲ್ಲಿ ರಿಯಲ್ ಎಷ್ಟೇಟ್ ಉದ್ಯಮ ನಡೆಸೋದು ಮಾತ್ರವಲ್ಲ ಬದುಕೋದು ಕಷ್ಟ ಎಂದು ಬೆದರಿಕೆ ಹಾಕಿದ್ದಾರೆ. ರಮೇಶ್ ಗೌಡ 50 ಕೋಟಿ ರೆಡಿ ಮಾಡಿಕೊಳ್ಳಿ ಜೊತೆಗೆ ದೇವಸ್ಥಾನ , ಶಾಲೆ ಕಟ್ಟಿಸುತ್ತಿದ್ದು ಅದಕ್ಕೆ ಐದು ಕೋಟಿ ನೀಡುವಂತೆ ಒತ್ತಾಯಿಸಿದ್ರು. ಈ ಹಣ ನೀಡದೇ ಇದ್ರೆ ನಿಮಗೆ ತೊಂದರೆ ಎದುರಾಗುತ್ತೆ ಎಂದು ಧಮ್ಕಿ ಹಾಕಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ರಮೇಶ ಗೌಡರು ವಾಟ್ಸಪ್ ಸಂದೇಶ ಕೂಡ ಕಳುಹಿಸಿರುತ್ತಾರೆ. ಕುಮಾರಸ್ವಾಮಿ ಹಾಗು ರಮೇಶ್ ಗೌಡ ನನ್ನ ವಿರುದ್ಧ ಷಡ್ಯಂತ್ರ ರಚಿಸಿ ಹಣಕ್ಕಾಗಿ ಬೇಡಿಕೆ ಇಟ್ಟು ಜೀವಬೆದರಿಕೆ ಒಡ್ಡುತ್ತಿದ್ದಾರೆ ಎಂದು ಉದ್ಯಮಿ ವಿಜಯ್ ಟಾಟಾ ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾರೆ.

Comments (0)

Your email address will not be published. Required fields are marked *

Back to top button