Tuesday, June 24, 2025
25.9 C
Bengaluru
Google search engine
LIVE
ಮನೆ#Exclusive NewsTop Newsಹಿಂದಿನ ಲೋಕಾಯುಕ್ತ ಎಸ್​​ಪಿ ವಿರುದ್ಧ ದೂರು

ಹಿಂದಿನ ಲೋಕಾಯುಕ್ತ ಎಸ್​​ಪಿ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ಅವರ ವಿರುದ್ಧ ಆರ್​ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು  ನೀಡಿದ್ದಾರೆ. ಭಾನುವಾರ ಇ-ಮೇಲ್ ಮೂಲಕ ಡಿಜಿ ಮತ್ತು ಐಜಿಪಿಯವರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಸೋಮವಾರ ಖುದ್ದು ಡಿಜಿ ಮತ್ತು ಐಜಿಪಿಯವರನ್ನು ಭೇಟಿಯಾಗಿ ನೀಡಿದ್ದ ಸರ್ಚ್ ವಾರೆಂಟ್ ಆಧರಿಸಿ, ಲೋಕಾಯುಕ್ತದ ಹಿಂದಿನ ಎಸ್​ಪಿ ಸುಜೀತ್ ನೇತೃತ್ವದಲ್ಲಿ ಪ್ರಾಧಿಕಾರದ ಮೇಲೆ ದಾಳಿ ನಡೆದಿತ್ತು.

ಆದರೆ ಆ ಸಂದರ್ಭದಲ್ಲಿ ಸೂಕ್ತ ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ. ವಶಪಡಿಕೊಂಡಿದ್ದ ಕೆಲ ಕಡತಗಳ ಕುರಿತು ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದಾರೆ. ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಿ, ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮ ದೂರಿನಲ್ಲಿ ಅವರು ಮನವಿ ಮಾಡಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments