ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ಅವರ ವಿರುದ್ಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರು ನೀಡಿದ್ದಾರೆ. ಭಾನುವಾರ ಇ-ಮೇಲ್ ಮೂಲಕ ಡಿಜಿ ಮತ್ತು ಐಜಿಪಿಯವರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಸೋಮವಾರ ಖುದ್ದು ಡಿಜಿ ಮತ್ತು ಐಜಿಪಿಯವರನ್ನು ಭೇಟಿಯಾಗಿ ನೀಡಿದ್ದ ಸರ್ಚ್ ವಾರೆಂಟ್ ಆಧರಿಸಿ, ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ನೇತೃತ್ವದಲ್ಲಿ ಪ್ರಾಧಿಕಾರದ ಮೇಲೆ ದಾಳಿ ನಡೆದಿತ್ತು.
ಆದರೆ ಆ ಸಂದರ್ಭದಲ್ಲಿ ಸೂಕ್ತ ದಾಖಲೆಗಳನ್ನು ವಶಪಡಿಸಿಕೊಂಡಿಲ್ಲ. ವಶಪಡಿಕೊಂಡಿದ್ದ ಕೆಲ ಕಡತಗಳ ಕುರಿತು ಸಚಿವ ಭೈರತಿ ಸುರೇಶ್ ಅವರಿಗೆ ಮಾಹಿತಿ ನೀಡಿದ್ದಾರೆ. ಸಚಿವ ಭೈರತಿ ಸುರೇಶ್ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಿ, ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ದೂರಿನಲ್ಲಿ ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ತಮ್ಮ ದೂರಿನಲ್ಲಿ ಅವರು ಮನವಿ ಮಾಡಿದ್ದಾರೆ.