Tuesday, June 24, 2025
25.9 C
Bengaluru
Google search engine
LIVE
ಮನೆಜಿಲ್ಲೆಕಾಂಗ್ರೆಸ್ಗೆ ಶಕ್ತಿ ಯೋಜನೆ ಪ್ರಚಾರ ಇತ್ತ ಶಾಲಾ ಮಕ್ಕಳಿಗೆ ಸಂಚಕಾರ!

ಕಾಂಗ್ರೆಸ್ಗೆ ಶಕ್ತಿ ಯೋಜನೆ ಪ್ರಚಾರ ಇತ್ತ ಶಾಲಾ ಮಕ್ಕಳಿಗೆ ಸಂಚಕಾರ!

ಧಾರವಾಡ : ಶಕ್ರಿ ಯೋಜನೆ ಜಾರಿಗೆ ಬಂದಾಗಿನಿಂದ ಅದರ ಎಫೆಕ್ಟ್ ಪಾಸಿಟೀವ್ ಗಿಂತಲೂ ನೆಗಟೀವ್ ಆಗಿ ಹೆಚ್ಚು ಪ್ರಚಾರ ಪಡೆದಿದೆ. ಒಂದು ಕಡೆ ಮಹಿಳೆಯರು ಪುಕ್ಸಟ್ಟೆ ಸೀಟಿಗಾಗಿ ಬಡಿದಾಡುತ್ತಿದ್ರೆ, ಮತ್ತೊಂದು ಕಡೆ ವಿದ್ಯಾರ್ಥಿಗಳು ಶಾಲೆಗೆ ಹೋಗೋಗೆ ಬಸ್ ಇಲ್ಲದೇ ಪರದಾಡುತ್ತಿದ್ದಾರೆ.

ಹೌದು ಶಕ್ತಿ ಯೋಜನೆ ಬಿಸಿ ರಾಜ್ಯದ ವಿವಿಧ ಭಾಗದ ವಿದ್ಯಾರ್ಥಿಗಳಿಗೂ ತಟ್ಟುತಿದ್ದು, ಧಾರವಾಡದ ವಿದ್ಯಾರ್ಥಿಗಳಿಗೂ ಇದರ ಬಿಸಿ ಈಗ ತಟ್ಟಿದೆ‌. ನಿಗದಿತ ಸಮಯಕ್ಕೆ ಬಸ್ ಬಾರದೇ ಇರುವುದರಿಂದ ಕಂಗಾಲಾದ ವಿದ್ಯಾರ್ಥಿಗಳು ಏಕಾಏಕಿ ಬಸ್‌ಗಳನ್ನು ತಡೆದು ಇಂದು ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಪ್ರತಿಭಟನೆ ನಡೆಸಿದರು.
ಗ್ರಾಮದ ಮುಖ್ಯ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾದು ಕಾದು ಸುಸ್ತಾಗಿದ್ದ ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಈ ಮೊದಲು ಮೂರ್ನಾಲ್ಕು ಬಸ್‌ಗಳು ನಿರಂತರವಾಗಿ ಸಂಚರಿಸುತ್ತಿದ್ದವು. ಆದರೆ, ಈಗ ಬೆಳಿಗ್ಗೆ 8 ಗಂಟೆಯ ಬಸ್ ಧಾರವಾಡದತ್ತ ಹೊರಟು ಹೋದರೆ, ಮುಂದೆ 10 ಗಂಟೆಯವರೆಗೂ ಯಾವುದೇ ಬಸ್ಸಿನ ಸೌಕರ್ಯವಿಲ್ಲ.

ಹೀಗಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಿಗದಿತ ಸಮಯಕ್ಕೆ ಕಾಲೇಜಿಗೆ ಹೋಗಲು ಆಗುತ್ತಿಲ್ಲ ಎಂದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತಮ್ಮ ಅಳಲು ತೊಡಿಕೊಂಡರು. ಬೆಳಿಗ್ಗೆ 9 ಗಂಟೆ ಹಾಗೂ 10 ಗಂಟೆಗೆ ಎರಡು ಬಸ್ಸಿನ ಅವಶ್ಯಕತೆ ಇದ್ದು, ಒಂದು ಬಸ್ಸನ್ನು ಹೆಚ್ಚುವರಿಯಾಗಿ 9 ಗಂಟೆಗೆ ಬಿಡಲು ಆಗ್ರಹಿಸಿದರು. ಈ ಎರಡು ಬಸ್ಸುಗಳು ಬಂದರೆ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಕಾಲೇಜಿಗೆ ಹೋಗಲು ಅನುಕೂಲವಾಗುತ್ತದೆ. ಈ ಸಂಬಂಧ ಡಿಪೋ ಮ್ಯಾನೇಜರ್‌ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕಿದರು.

ಸ್ಥಳಕ್ಕೆ ಪೊಲೀಸರು ಕೂಡ ದೌಡಾಯಿಸಿ ಕಂಟ್ರೋಲರ್ ಅವರೊಂದಿಗೆ ಮಾತುಕತೆ ನಡೆಸಿದರು. ಸ್ಥಳಕ್ಕೆ ಡಿಪೊ ಮ್ಯಾನೇಜರ್ ಬಂದು ನಮಗೆ ಬಸ್ ಬಿಡುವುದಾಗಿ ಲಿಖಿತ ರೂಪದಲ್ಲಿ ಭರವಸೆ ಕೊಡಬೇಕು ಎಂದು ವಿದ್ಯಾಥಿರ್ಗಳು ಪಟ್ಟು ಹಿಡಿದರು. ಮಧ್ಯ ಪ್ರವೇಶ ಮಾಡಿದ ಗ್ರಾಮದ ಪ್ರಮುಖರು, ಮಕ್ಕಳ ಪೋಷಕರು ಪೊಲೀಸರೊಂದಿಗೆ ಸೇರಿ ವಿದ್ಯಾರ್ಥಿಗಳ ಮನವೊಲಿಸಿದ್ದು, ಸದ್ಯ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ. ಸೂಕ್ತ ಸಮಯಕ್ಕೆ ಬಸ್ ಬರುತ್ತಾ..? ಉತ್ತರಿಸಬೇಕಾದವರು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments