Top Newsಸುದ್ದಿ

ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಪ್ರಯಾಣಿಕರಿಗೆ ವಿಶೇಷ ರೈಲು

ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ ಈ ಅಪಘಾತ ಸಂಭವಿಸಿದೆ.

ಹಳಿತಪ್ಪಿದ ಬಾಗ್ಮತಿ ಎಕ್ಸ್‌ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ ನಾಲ್ವರು ಪೊನ್ನೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲ್ವೆಯ ಅಧಿಕೃತ ಹೇಳಿಕೆಯ ಪ್ರಕಾರ ಎಲ್ಲಾ ಏಳು ಮಂದಿ ಪರಿಹಾರಗಳಡಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಾಗಮತಿ ಎಕ್ಸ್‌ಪ್ರೆಸ್‌ನಲ್ಲಿ ಸಿಲುಕಿದ್ದ ಪ್ರಯಾಣಿಕರನ್ನು ಬಸ್‌ಗಳ ಮೂಲಕ ಪೊನ್ನೇರಿಗೆ ಮತ್ತು ನಂತರ ಚೆನ್ನೈ ಸೆಂಟ್ರಲ್‌ಗೆ ಎರಡು ವಿಶೇಷ ಉಪನಗರ ರೈಲುಗಳ ಮೂಲಕ ಮುಂಜಾನೆ ಸಾಗಿಸಲಾಯಿತು.

ಚೆನ್ನೈ ಸೆಂಟ್ರಲ್ ತಲುಪಿದ ನಂತರ, ರೈಲ್ವೇ ವೈದ್ಯರು ವೈದ್ಯಕೀಯ ತಪಾಸಣೆ ನಡೆಸಿದರು. ಪ್ರಯಾಣಿಕರಿಗೆ ಆಹಾರ ಮತ್ತು ನೀರನ್ನು ಒದಗಿಸಲಾಯಿತು, ಮೊದಲು ಅರಕ್ಕೋಣಂ, ರೇಣಿಗುಂಟಾ ಮತ್ತು ಗುಡೂರ್ ಮೂಲಕ ದರ್ಭಾಂಗಕ್ಕೆ ಹೋಗುವ ವಿಶೇಷ ರೈಲಿನಲ್ಲಿ ಪ್ರಯಾಣಿಸಲಾಯಿತು.ಈ ರೈಲು ಬೆಳಿಗ್ಗೆ 4:45 ಕ್ಕೆ ಚೆನ್ನೈ ಸೆಂಟ್ರಲ್‌ನಿಂದ ಹೊರಟಿದೆ.

 

ಅಪಘಾತದ ಸ್ಥಳದಲ್ಲಿ ಹಳಿಯ ಮರುಸ್ಥಾಪನೆ ಕಾರ್ಯವು ವೇಗವಾಗಿ ಪ್ರಗತಿಯಲ್ಲಿದೆ ಎಂದು ದಕ್ಷಿಣ ರೈಲ್ವೆ ವರದಿ ಮಾಡಿದೆ. ಈ ಮಧ್ಯೆ, ಗುಡೂರು-ಚೆನ್ನೈ ಮೂಲಕ ಓಡಬೇಕಿದ್ದ ಎಲ್ಲಾ ರೈಲುಗಳನ್ನು ರೇಣಿಗುಂಟಾ, ಅರಕ್ಕೋಣಂ ಮತ್ತು ಪೆರಂಬೂರ್ ಅಥವಾ ಚೆಂಗಲ್ಪಟ್ಟು ಮೂಲಕ ತಿರುಗಿಸಲಾಯಿತು.

ಹೆಚ್ಚುವರಿಯಾಗಿ, ಚೆನ್ನೈ-ತಿರುಪತಿ, ಅರಕ್ಕೋಣಂ-ಪುದುಚೇರಿ ಮತ್ತು ಚೆನ್ನೈ-ಪುದುಚೇರಿ ಮಾರ್ಗಗಳಲ್ಲಿ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ಮತ್ತು ಮೆಮು ರೈಲುಗಳನ್ನು ರದ್ದುಗೊಳಿಸಲಾಗಿದೆ.

ನಿನ್ನೆ ಸಾಯಂಕಾಲ 7:50ಕ್ಕೆ ಪೆರಂಬೂರಿನಿಂದ ಹೊರಟು ದರ್ಭಾಂಗಕ್ಕೆ ಹೋಗುವ ಬಾಗ್ಮತಿ ಎಕ್ಸ್‌ಪ್ರೆಸ್ ರಾತ್ರಿ 8:30 ರ ಸುಮಾರಿಗೆ ಗುಮ್ಮಿಡಿಪುಂಡಿ ಬಳಿಯ ಕವರೈಪೆಟ್ಟೈ ತಲುಪಿತು. ರೈಲು ಮುಖ್ಯ ಮಾರ್ಗದಲ್ಲಿ ಗುಡೂರಿನತ್ತ ಸಾಗಲು ಹಸಿರು ನಿಶಾನೆ ತೋರಿಸಲಾಯಿತು ಆದರೆ ಅದರ ಬದಲಾಗಿ ಕವರಾಯಪೆಟ್ಟೈ ನಿಲ್ದಾಣದಲ್ಲಿ ಲೂಪ್ ಲೈನ್ ನ್ನು ಪ್ರವೇಶಿಸಿತು, ಅಲ್ಲಿ ಸರಕು ರೈಲು ನಿಲುಗಡೆಯಾಗಿದೆ ಎಂದು ರೈಲ್ವೆ ಸಿಬ್ಬಂದಿ ಹೇಳಿದರು.

ಅಪಘಾತ ಹೇಗಾಯ್ತು?
ಮೈಸೂರಿನಿಂದ ದರ್ಬಾಂಗ್‌ಗೆ ತೆರಳುತ್ತಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರಾತ್ರಿ ಪೊನ್ನೇರಿ ರೈಲು ನಿಲ್ದಾಣ ದಾಟಿತ್ತು. ಈ ವೇಳೆ ಮುಂದಿನ ನಿಲ್ದಾಣ ಕವರಪೆಟ್ಟೈಗೆ ತೆರಳಲು ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು.  ರಾತ್ರಿ 8:30ರ ವೇಳೆ ನಿಲ್ದಾಣ ಪ್ರವೇಶಿಸುವಾಗ ಗೂಡ್ಸ್‌ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ಅಪಘಾತಕ್ಕೆ ಕಾರಣ ಏನು?
ಈ ರೈಲು ಕವರಪೆಟ್ಟೈ ನಿಲ್ದಾಣದ ನಂತರ ಗುಡೂರಿನ ಕಡೆಗೆ ಹೋಗಬೇಕಿತ್ತು. ಇದು ಎಕ್ಸ್‌ಪ್ರೆಸ್‌ ರೈಲಾಗಿದ್ದ ಕಾರಣ ಕವರಪೆಟ್ಟೈ ನಿಲ್ದಾಣದಲ್ಲಿ ನಿಲುಗಡೆ ಇರಲಿಲ್ಲ. ಚೆನ್ನೈನಿಂದ ಈ ರೈಲಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿತ್ತು. ಚಾಲಕ ಸಿಗ್ನಲ್‌ಗಳನ್ನು ಸರಿಯಾಗಿ ಅನುಸರಿಸಿದ್ದಾನೆ. ಇಲ್ಲಿ ರೈಲು ಮೇನ್‌ ಲೈನ್‌ನಲ್ಲಿ ಸಾಗಬೇಕಿತ್ತು.ಆದರೆ ಲೂಪ್‌ ಲೈನ್‌ಗೆ ರೈಲು ಪ್ರವೇಶ ಮಾಡಿ ನಿಂತಿದ್ದ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಬೋಗಿಗಳು ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಗಂಟೆಗೆ 100 ಕಿ.ಮೀ ವೇಗದಲ್ಲಿ  ಎಕ್ಸ್‌ಪ್ರೆಸ್‌ ರೈಲು ಸಂಚರಿಸುತ್ತಿದ್ದ ಕಾರಣ 13 ಬೋಗಿಗಳು ಹಳಿ ತಪ್ಪಿವೆ.

Comments (0)

Your email address will not be published. Required fields are marked *

Back to top button