#Exclusive NewsTop Newsವಿಶೇಷಸಿನಿಮಾಸುದ್ದಿ

ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಯ್ತಾ!

ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ  ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ. ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕರೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಆ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಿದೆ. 2022 ರಲ್ಲಿ ಪ್ರಕರಣ ದಾಖಲಾಗಿತ್ತು, ಈಗ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್​ಸಿಆರ್ ದಾಖಲಾಗಿದೆ.

ಯುವ ನಿರ್ಮಾಪಕ ಭರತ್ ಎಂಬುವರು ತಮಗೆ ಕರೆ ಮಾಡಿದ್ದ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್​ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು. 2022 ರಲ್ಲಿ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಎನ್​ಸಿಆರ್ ದಾಖಲಾಗಿತ್ತು. ಈಗ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಎನ್​ಸಿಆರ್​ ದಾಖಲಾಗಿದ್ದು, ತನಿಖೆ ನಡೆಯುವ ಸಾಧ್ಯತೆ ಇದೆ.

ಯುವ ನಿರ್ಮಾಪಕ ಭರತ್, ‘ಭಗವಾನ್ ಶ್ರೀಕೃಷ್ಣಾ’ ಹೆಸರಿನ ಸಿನಿಮಾ ಪ್ರಾರಂಭ ಮಾಡಿದ್ದರು. ಸಿನಿಮಾಕ್ಕೆ ಧ್ರುವನ್ ನಾಯಕ ನಟನಾಗಿದ್ದರು. ಆದರೆ ಕೋವಿಡ್ ಬಂದ ಕಾರಣಕ್ಕೆ ಸಿನಿಮಾದ ಚಿತ್ರೀಕರಣ ನಿಂತು ಹೋಯ್ತು. ಬಳಿಕ ಧ್ರುವನ್, ದರ್ಶನ್ ಬಳಿ ಹೋಗಿ ಅವರ ಕೈಯಿಂದ ಭರತ್​ಗೆ ಕರೆ ಮಾಡಿಸಿದ್ದರು. ಆಗ ಭರತ್ ಬಿಡುಗಡೆ ಮಾಡಿದ್ದ ಆಡಿಯೋ ರೆಕಾರ್ಡ್​ನಲ್ಲಿದ್ದಂತೆ, ಆರಂಭದಲ್ಲಿ ಕೂಲ್ ಆಗಿಯೇ ಮಾತನಾಡಿದ್ದ ದರ್ಶನ್, ‘ಧ್ರುವನ್ ನಿಮ್ಮನ್ನೆ ನಂಬಿದ್ದಾನೆ, ಸಿನಿಮಾ ನಿಲ್ಲಿಸಬೇಡಿ’ ಎಂದು ಮನವಿ ಮಾಡಿದ್ದರು. ಆದರೆ ಮಾತು ಮುಂದುವರೆದಂತೆ, ‘ಸಿನಿಮಾ ಮುಗಿಸದೇ ಇದ್ದರೆ, ಭೂಮಿ ಮೇಲೆ ಇಲ್ಲದಂತೆ ಮಾಡಿಬಿಡುತ್ತೇನೆ’ ಎಂದೆಲ್ಲ ಬೆದರಿಕೆ ಹಾಕಿದ್ದರು. ಕೆಲವು ಅವಾಚ್ಯ ಶಬ್ದಗಳನ್ನು ಸಹ ದರ್ಶನ್ ಬಳಸಿದ್ದರು.

Comments (0)

Your email address will not be published. Required fields are marked *

Back to top button