#Exclusive NewsTop Newsಜಿಲ್ಲೆವಿಶೇಷಸಿನಿಮಾಸುದ್ದಿ

ನಟ ದರ್ಶನ್​ ಅರ್ಜಿ ವಿಚಾರಣೆ ಅ.28ಕ್ಕೆ ಮುಂದೂಡಿಕೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್​ಗೆ ಕೆಳಹಂತದ ನ್ಯಾಯಾಲಯದಲ್ಲಿ ಜಾಮೀನು ಸಿಗಲಿಲ್ಲವಾದ ಕಾರಣ ದರ್ಶನ್ ಪರ ವಕೀಲರು ಹೈಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಹಾಕಿದ್ದರು. ಹೈಕೋರ್ಟ್​ನಲ್ಲಿ ಇಂದು ಮೊದಲ ಬಾರಿಗೆ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ಮುಂದಿನ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದ್ದಾರೆ. ಸಿಸಿಎಚ್ ನ್ಯಾಯಾಲಯದಲ್ಲಿ ದರ್ಶನ್ ಪರವಾಗಿ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟ್​ನಲ್ಲಿಯೂ ವಾದ ಮಂಡಿಸುತ್ತಿದ್ದು, ದರ್ಶನ್​ಗೆ ಜಾಮೀನು ಕೊಡಿಸುವ ಅವಿರತ ಪ್ರಯತ್ನ ಮಾಡುತ್ತಿದ್ದಾರೆ.

ಅಕ್ಟೋಬರ್ 28ರ ಒಳಗಾಗಿ ಬಳ್ಳಾರಿ ಜೈಲು ಅಧಿಕಾರಿಗಳು ದರ್ಶನ್​ರ ಆರೋಗ್ಯ ಸ್ಥಿತಿಯ ಬಗ್ಗೆ ವರದಿಯನ್ನು ಹೈಕೋರ್ಟ್​ಗೆ ನೀಡಬೇಕಿದ್ದು, ವರದಿ ಆಧರಿಸಿ ದರ್ಶನ್​ಗೆ ಜಾಮೀನು ನೀಡಬೇಕೊ ಇಲ್ಲವೋ ಅಥವಾ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರೆಸಬೇಕೋ ಎಂಬುದನ್ನು ನಿಶ್ಚಯ ಮಾಡಲಾಗುತ್ತದೆ.

ಈ ಹಿಂದೆ ದರ್ಶನ್ ಬೆಂಗಳೂರಿನ ಜೈಲಿನಲ್ಲಿದ್ದಾಗಲೂ ಸಹ ಜೈಲು ಅಧಿಕಾರಿಗಳು ಆರೋಗ್ಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಆದರೆ ಆಗ ಜಾಮೀನು ಅರ್ಜಿಗಾಗಿ ಅಲ್ಲದೆ, ದರ್ಶನ್​ಗೆ ಮನೆಯಿಂದ ವಿಶೇಷ ಸೌಲಭ್ಯ ಪಡೆಯಲು ಹಾಕಿದ್ದ ಅರ್ಜಿಯ ವಿಚಾರಣೆ ಸಮಯದಲ್ಲಿ ವರದಿ ನೀಡಲಾಗಿತ್ತು. ಆದರೆ ನ್ಯಾಯಾಲಯವು ಆಗಲೂ ಸಹ ವಿಶೇಷ ಸೌಲಭ್ಯವನ್ನು ಪಡೆಯುವಂತಿಲ್ಲ ಎಂದಿತ್ತು.

Comments (0)

Your email address will not be published. Required fields are marked *

Back to top button